ತೂಬು ಗೇಟ್ ಪರಿಶೀಲನೆ ನಡೆಸಿದ ವಿಜಯಪುರ ಜಿಲ್ಲಾಧಿಕಾರಿ

ವಿಜಯಪುರ, ಮಾ. 23- ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಅವರು ಬಸವನ ಬಾಗೇವಾಡಿ ತಾಲೂಕಿನ ಅರೆಶಂಕರ ಕೆರೆಯ ತೂಬು ಗೇಟ್ ಮೂಲಕ ವ್ಯರ್ಥವಾಗಿ ಹರಿದು ಹೋಗುತ್ತಿದ್ದ ನೀರನ್ನು ತಡೆಯಲು ಕೈಗೊಂಡಿರುವ ಕ್ರಮಗಳನ್ನು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ವಿಜಯಪುರ ಜಿ. ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋವಿಂದರೆಡ್ಡಿ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಶ್ವ ಕ್ಷಯರೋಗ ದಿನ ಮಾ. 24 ರಂದು ವಿಶೇಷ ಸ್ಥಳಗಳ ಮೇಲೆ ಕೆಂಪು ಬೆಳಕು- ಡಿಸಿ ಪಿ.ಸುನೀಲ ಕುಮಾರ್

ವಿಜಯಪುರ, ಮಾ 23 : ವಿಶ್ವ ಕ್ಷಯ ರೋಗ ದಿನದ ಅಂಗವಾಗಿ ಮಾ. 24 ರಂದು ಬುಧವಾರ ಜಿಲ್ಲಾಡಳಿತ ಹಾಗೂ ಜಿಲ್ಲಾ ಕ್ಷಯ ರೋಗ ನಿರ್ಮೂಲನಾ ಅಧಿಕಾರಿಗಳ ಕಾರ್ಯಾಲಯದಿಂದ ದೇಶ ಗೆಲ್ಲಿಸಿ, ಟಿಬಿ ಸೋಲಿಸಿ ಜನಜಾಗೃತಿ ಅಭಿಯಾನ ನಡೆಯಲಿದೆ. ಅಲ್ಲದೇ, ಜಿಲ್ಲೆಯಲ್ಲಿರುವ ಆಲಮಟ್ಟಿ ಜಲಾಷಯ, ಗೋಲಗುಂಬಜ್, ಜಿಲ್ಲಾಧಿಕಾರಿಗಳ ಕಾರ್ಯಾಲಯ, ಜಿಲ್ಲಾಸ್ಪತ್ರೆ ಮತ್ತು ಎಲ್ಲ ತಾಲೂಕಾಸ್ಪತ್ರೆಗಳ ಮೇಲೆ ಒಂದು ದಿನ ಕೆಂಪು ದೀಪದ ಬೆಳಕು ಚೆಲ್ಲುವ ಮೂಲಕ ಜನರನ್ನು ಆಕರ್ಷಿಸಿ ವಿಶೇಷವಾಗಿ ಆಚರಿಸಲಾಗುವುದು ಎಂದು ವಿಜಯಪುರ ಜಿಲ್ಲಾ ಕ್ಷಯ […]

ಕೊರೊನಾ 2ನೇ ಅಲೆ ಆತಂಕ- ಜಿಲ್ಲಾಧಿಕಾರಿಯಿಂದ ಮುನ್ನೆಚ್ಚರಿಕೆಗೆ ಸೂಚನೆ

ವಿಜಯಪುರ, ಮಾ. 23- ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೊರೊನಾ 2ನೇ ಅಲೆ ಕಂಡು ಬರುತ್ತಿದ್ದು, 2ನೇ ಅಲೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಸೂಚನೆ ನೀಡಿದ್ದಾರೆ. ಮಾ. 15 ರಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ವಿಡಿಯೋ ಸಂವಾದ ಸಭೆಯಲ್ಲಿ ಕೋವಿಡ್ ನಿಯಂತ್ರಣ ಕುರಿತುಅಗತ್ಯ ಮುಂಜಾಗ್ರತಾ ಕ್ರಮಗಳಾದ ಫೇಸ್ ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ನಿರ್ದೇಶಿಸಿದ್ದು, ಈ ಹಿನ್ನೆಲೆಯಲ್ಲಿಮತ್ತೊಮ್ಮೆ ಸಾರ್ವಜನಿಕರು ಈ ಸೂಚನೆಗಳನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್ […]