ಕೊರೊನಾ ಲಸಿಕೆ ಪಡೆದ ಜೆಡಿಎಸ್ ಶಾಸಕ ಡಾ. ದೇವಾನಂದ ಚವ್ಹಾಣ

ಬಸವ ನಾಡು

ವಿಜಯಪುರ- ವಿಜಯಪುರ ಜಿಲ್ಲೆಯ ನಾಗಠಾಣ(ಮೀ) ಜೆಡಿಎಸ್ ಶಾಸಕ ಡಾ. ದೇವಾನಂದ ಚವ್ಹಾಣ ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದಾರೆ.
ವಿಜಯಪುರ ಜಿಲ್ಲಾಸ್ಪತ್ರೆಗೆ ತೆರಳಿದ ಶಾಸಕರಿಗೆ ಆಸ್ಪತ್ರೆಯ ಸಿಬ್ಬಂದಿ ಕೊರೊನಾ ಲಸಿಕೆ ಹಾಕಿದರು. ಬಳಿಕ ಮಾತನಾಡಿದ ಅವರು, ಈಗ ಕೊರೊನಾ 2ನೇ ಅಲೆ ಜೋರಾಗಿದ್ದು, ಎಲ್ಲರೂ ಕೊರೊನಾ ಲಸಿಕೆ ಪಡೆಯಬೇಕು. ಯಾರೂ ಭಯಪಡುವ ಅಗತ್ಯವಿಲ್ಲ. ಎಲ್ಲರೂ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಪಾಡಿಕೊಲ್ಳುವ ಮೂಲಕ ಕೊರೊನಾ ಮೆಟ್ಟಿ ನಿಲ್ಲಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಶರಣಪ್ಪ ಕಟ್ಟಿ ಮತ್ತು ಇತರ ಹಿರಿಯ ವೈದ್ಯಾಧಿಕಾರಗಿಳು ಉಪಸ್ಥಿತರಿದ್ದರು

Leave a Reply

ಹೊಸ ಪೋಸ್ಟ್‌