ಬೆಸುಗೆ ಕಾಲ ಯಾರನ್ನು ಬೆಸೆಯುತ್ತೋ? ಬೇರ್ಪಡಿಸುತ್ತೋ? ಕತ್ನಳ್ಳಿ ಕಾರ್ಣಿಕರ ಮಾರ್ಮಿಕ ಭವಿಷ್ಯ

ಬಸವ ನಾಡು ವಿಜಯಪುರ- ಎರಡು ವರ್ಷಗಳ ಹಿಂದೆಯೇ ಕೊರೊನಾ ಬಗ್ಗೆ ಭವಿಷ್ಯ ನುಡಿದಿದ್ದ ಬಸವ ನಾಡು ವಿಜಯಪುರ ಜಿಲ್ಲೆಯ ಕತ್ನಳ್ಳಿ ಶ್ರೀ ಸದಾಶಿವ ಮಠಾಧೀಶ ಶ್ರೀ ಶಿವಯ್ಯ ಸ್ವಾಮೀಜಿ ಈ ಬಾರಿಯೂ ಭವಿಷ್ಯ ನುಡಿದಿದ್ದಾರೆ.ಈ ಹಿಂದೆ ಚಹಾ ಮಾರಾಟ ಮಾಡುವವ ದೇಶದ ಚುಕ್ಕಾಣಿ ಹಿಡಿಯುತ್ತಾನೆ ಎಂದು 2013 ರಲ್ಲಿಯೇ ಭವಿಷ್ಯ ನುಡಿದಿದ್ದ ಸ್ವಾಮೀಜಿ, ಎರಡು ವರ್ಷಗಳ ಹಿಂದೆ ವೈದ್ಯರು ತಲೆಗೆ ಕೈ ಹಚ್ಚಿಕೊಳ್ಳುವ ಪರಿಸ್ಥಿತಿ ಎದುರಾಗಲಿದೆ ಎಂದು ಹೇಳುವ ಮೂಲಕ ಯಾರಿಗೂ ಗೊತ್ತಿರದ ಕೊರೊನಾ ಬಗ್ಗೆ ಸೂಚ್ಯವಾಗಿ […]

ಸುತ್ತೂರು ಸ್ವಾಮೀಜಿ, ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಶಾಸಕ ಯತ್ನಾಳ

ಬಸವ ನಾಡು ವಿಜಯಪುರ- ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸುತ್ತೂರು ಶ್ರೀಗಳು ಮತ್ತು ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳ ಆಶೀರ್ವಾದ ಪಡೆದಿದ್ದಾರೆ. ವಿಜಯಪುರ ನಗರದಲ್ಲಿರುವ ಜ್ಞಾನಯೋಗಾಶ್ರದಮಲ್ಲಿ ನಿನ್ನೆಯಿಂದ ತಂಗಿದ್ದ ಇಬ್ಬರೂ ಶ್ರೀಗಳನ್ನು ಯತ್ನಾಳ ಬೆಳಿಗ್ಗೆ ಭೇಟಿ ಮಾಡಿದರು. ಅಲ್ಲದೇ, ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಜಿಯವರನ್ನು ಭೇಟಿ ಮಾಡಿ ಗೌರವಿಸಿ ಆಶೀರ್ವಾದ ಪಡೆದರು. ಅಲ್ಲದೇ, ಇದೇ ಸಂದರ್ಭದಲ್ಲಿ ನಡೆದಾಡುವ ದೇವರು ಎಂದೇ ಹೆಸರಾಗಿರುವ ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳನ್ನೂ ಭೇಟಿ ಮಾಡಿ ನಾನಾ […]

ಕೊರೊನಾ 2ನೇ ಅಲೆ ಹೆಚ್ಚಳ ಹಿನ್ನೆಲೆ ಮದುವೆ, ಗ್ರಂಥಾಲಯ, ಅಂಗಡಿ ಮುಂಗಟ್ಟುಗಳ ವ್ಯಾಪ್ತಿಯಲ್ಲಿ ಮುಂಜಾಗ್ರತೆ ಕೈಗೊಳ್ಳಿ- ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ಬಸವ ನಾಡು ವಿಜಯಪುರ- ಕೊರೊನಾ 2ನೇ ಅಲೆ ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಾಗೃತಗೊಳ್ಳುವ ಜೊತೆಗೆ ಹೆಚ್ಚಿನ ಜನ ಸೇರುವಂಥ ಕಲ್ಯಾಣ ಮಂಟಪ, ಅಂಗಡಿ ಮುಂಗಟ್ಟುಗಳು ಮತ್ತು ಗ್ರಂಥಾಲಯಗಳ ವ್ಯಾಪ್ತಿಯಲ್ಲಿ ಕೊರೊನಾ ನಿಯಂತ್ರಣಾ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸುವಂತೆ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಸೂಚನೆ ನೀಡಿದ್ದಾರೆ.ವಿಜಯಪುರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಾನಾ ಕಲ್ಯಾಣ ಮಂಟಪ, ಸಾರ್ವಜನಿಕ ಗ್ರಂಥಾಲಯ ಅಧಿಕಾರಿಗಳು ಮತ್ತು ನಾನಾ ವ್ಯಾಪಾರಸ್ಥರೊಂದಿಗೆ ಸಭೆ ನಡೆಸಿದ ಅವರು, ಕೊರೊನಾ 2ನೇ ಅಲೆ ಹೆಚ್ಚಾಗುತ್ತಿದ್ದು, ಈ ಕುರಿತು ಈಗಿನಿಂದಲೇ […]