ಸುತ್ತೂರು ಸ್ವಾಮೀಜಿ, ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಶಾಸಕ ಯತ್ನಾಳ

ಬಸವ ನಾಡು

ವಿಜಯಪುರ- ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸುತ್ತೂರು ಶ್ರೀಗಳು ಮತ್ತು ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳ ಆಶೀರ್ವಾದ ಪಡೆದಿದ್ದಾರೆ.


ವಿಜಯಪುರ ನಗರದಲ್ಲಿರುವ ಜ್ಞಾನಯೋಗಾಶ್ರದಮಲ್ಲಿ ನಿನ್ನೆಯಿಂದ ತಂಗಿದ್ದ ಇಬ್ಬರೂ ಶ್ರೀಗಳನ್ನು ಯತ್ನಾಳ ಬೆಳಿಗ್ಗೆ ಭೇಟಿ ಮಾಡಿದರು. ಅಲ್ಲದೇ, ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಜಿಯವರನ್ನು ಭೇಟಿ ಮಾಡಿ ಗೌರವಿಸಿ ಆಶೀರ್ವಾದ ಪಡೆದರು.


ಅಲ್ಲದೇ, ಇದೇ ಸಂದರ್ಭದಲ್ಲಿ ನಡೆದಾಡುವ ದೇವರು ಎಂದೇ ಹೆಸರಾಗಿರುವ ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳನ್ನೂ ಭೇಟಿ ಮಾಡಿ ನಾನಾ ವಿಚಾರಗಳ ಕುರಿತು ಚರ್ಚಿಸಿದರು. ಅಲ್ಲದೇ, ಅವರ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ನಾನಾ ಕಿರಿಯ ಸ್ವಾಮೀಜಿಗಳೂ ಕೂಡ ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌