ಕೊರೋನಾ ನಿಯಂತ್ರಣ ಕುರಿತು ಅಧಿಕಾರಿಗಳೊಂದಿಗೆ ವಿಜಯಪುರ ಜಿಲ್ಲಾಧಿಕಾರಿ ಸಭೆ

ಬಸವ ನಾಡು ವಿಜಯಪುರ- ವಿಜಯಪುರ ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಸಿಂದಗಿ ಮತ್ತು ದೇವರ ಹಿಪ್ಪರಗಿ ತಾಲೂಕುಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.ಸಿಂದಗಿಯಲ್ಲಿ ನಡೆದ ಈ ಸಭೆಯಲ್ಲಿ ಸಿಂದಗಿ ಮತ್ತು ದೇವರ ಹಿಪ್ಪರಗಿ ತಾಲೂಕುಗಳ ನಾನಾ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.ಕೊರೊನಾ ಕುರಿತು ಈಗಾಗಲೇ ನೀಡಲಾಗಿರುವ ಗಂಟಲು ದ್ರವದ ಮಾದರಿಗಳನ್ನು ನಿಗದಿಯಂತೆ ಸಂಗ್ರಹಿಸಬೇಕು. ಕ್ವಾರಂಟೈನ್ ವಾಚ್ ಆಪ್‍ನಲ್ಲಿ ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕು ಎಂದು ಪಿ. ಸುನೀಲ ಕುಮಾರ ಅಧಿಕಾರಿಗಳಿಗೆ […]