ಶಾಸಕ ಎಂ. ಬಿ. ಪಾಟೀಲ ನಾಳೆಯಿಂದ ಒಂದು ವಾರ ವಿಜಯಪುರದಲ್ಲಿ ವಾಸ್ತವ್ಯ

ಬಸವ ನಾಡು

ವಿಜಯಪುರ- ಮಾಜಿ ಸಚಿವ, ಬಬಲೇಶ್ವರ ಕಾಂಗ್ರೆಸ್ ಶಾಸಕ, ಎಂ. ಬಿ. ಪಾಟೀಲ ನಾಳೆಯಿಂದ ಒಂದು ವಿಜಯಪುರದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಬೆ. 10.30 ಗಂಟೆಯಿಂದ ಮ. 2.00 ಗಂಟೆಯರೆಗೆ ಬಿ.ಎಲ್.ಡಿ.ಇ.ಸಂಸ್ಥೆ ತಮ್ಮ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಆಲಿಸಲು ಲಭ್ಯ ಇರಲಿದ್ದಾರೆ. ಅನಿವಾರ್ಯ ಇದ್ದವರು ಮಾತ್ರ ಈ ಸಮಯದಲ್ಲಿ ಶಾಸಕರನ್ನು ಭೇಟಿ ಮಾಡಬಹುದು.
ಇದನ್ನು ಹೊರತುಪಡಿಸಿ ಬೇರೆ ಸಂದರ್ಭಗಳಲ್ಲಿ ಸಾರ್ವಜನಿಕರ ಭೇಟಿ ಇಲ್ಲ. ತೀವ್ರ ತುರ್ತು ಸಂದರ್ಭಗಳಲ್ಲಿ ಮಾತ್ರ ದೂರವಾಣಿ ಮೂಲಕ ಸಂಪರ್ಕಿಸಬಹುದು ಎಂದು ಬಬಲೇಶ್ವರ ಶಾಸಕ ಕಚೇರಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಶಾಸಕ ಎಂ ಬಿ ಪಾಟೀಲ್ ರಿಂದ ಸಾರ್ವಜನಿಕರಲ್ಲಿ ಮನವಿ

ದಿನೇ ದಿನೇ ಹೆಚ್ಚುತ್ತಿರುವ ಕೊರೂನಾ ರೋಗಿಗಳ ಸಂಖ್ಯೆಯಿಂದ ವೈದ್ಯರು, ಆಸ್ಪತ್ರೆಗಳಿಗೆ ಎಲ್ಲವನ್ನೂ ನಿಭಾಯಿಸಲು ಕಷ್ಟಸಾಧ್ಯವಾಗಿದೆ. ಎಲ್ಲರೂ ತಮ್ಮ ಶಕ್ತಿ ಮೀರಿ ಕೆಲಸ ಮಾಡುತ್ತಿದ್ದಾರೆ. ಸಾರ್ವಜನಿಕರು ಕೂರೊನಾ ನಿಯಮಗಳನ್ನು ಉಲ್ಲಂಘಿಸಬಾರದು. ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಪಾಡಿಕೊಂಡು, ಸ್ಯಾನಿಟೈಜರ್ ಬಳಸಿ, ಅಗತ್ಯವಿದ್ದರೆ ಮಾತ್ರ ಮನೆಯಿಂದ ಹೊರಗಡೆ ಬರಬೇಕು. ಅನಗತ್ಯವಾಗಿ ಸಾರ್ವಜನಿಕವಾಗಿ ತಿರುಗಾಡಬಾರದು ಮತ್ತು ತುರ್ತು ಸಂದರ್ಭಗಳಲ್ಲಿ ಮಾತ್ರ ತಮ್ಮ ಮನೆಗಳಿಂದ ಹೊರಗಡೆ ಹೋಗಬೇಕು. ಮುಂದಿನ ಕೆಲವು ದಿನಗಳ ಕಾಲ ಸಂಚರಿಸದೇ ಇರುವುದು ತಮ್ಮ ಹಾಗೂ ತಮ್ಮ ಕುಟುಂಬದ ಸದಸ್ಯರ ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು ಎಂದು ಎಂ.‌ ಬಿ. ಪಾಟೀಲ ಸಾರ್ವಜನಿಕರಲ್ಲಿ ಕಳಕಳಿಯ ವಿನಂತಿ ಮನವಿ ಮಾಡಿದ್ದಾರೆ.

Leave a Reply

ಹೊಸ ಪೋಸ್ಟ್‌