ಬಬಬಲೇಶ್ವರ ಮತಕ್ಷೇತ್ರ ವ್ಯಾಪ್ತಿಯ ನಾನಾ ಕೊರೊನಾ ಲಸಿಕಾ ಕೇಂದ್ರಗಳಿಗೆ ಶಾಸಕ ಎಂ. ಬಿ. ಪಾಟೀಲ ಭೇಟಿ, ಪರಿಶೀಲನೆ

ಬಸವ ನಾಡು

ವಿಜಯಪುರ- ಎಲ್ಲರೂ ಕೊರೊನಾ ಲಸಿಕೆ ಹಾಕಿಸಿ ಕೊಳ್ಳುವುದು, ಸಾಮಾಜಿಕ ಅಂತರ ಕಾಪಾಡುವುದು ಮತ್ತು ಮಾಸ್ಕ್, ಸೈನಿಟೈಸರ್ ಬಳಸುವುದರಿಂದ ನಿಯಂತ್ರಣಕ್ಕೆ ಸಾಧ್ಯ. ಪ್ರತಿಯೊಬ್ಬರು ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಂಡು, ಈ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು ಎಂದು ಮಾಜಿ ಸಚಿವ ಮತ್ತು ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ ತಿಳಿಸಿದರು.
ವಿಜಯಪುರ ಜಿಲ್ಲೆಯ ತಮ್ಮ ಸ್ವಕ್ಷೇತ್ರ ಬಬಲೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಆಯೋಜಿಸಲಾಗಿರುವ ಕೊರೊನಾ ಲಸಿಕೆ ಅಭಿಯಾನ ಅಂಗವಾಗಿ ನಾನಾ ಲಸಿಕಾ ಕೇಂದ್ರಗಳಿಗೆ ಭೇಟಿ ನೀಡಿದ ಅವರು, ಮಮದಾಪುರದಲ್ಲಿ ಮಾತನಾಡಿದರು.


ಇಂದಿನಿಂದ 18 ವರ್ಷ ಮೇಲ್ಪಟ್ಟವರಿಗೂ ಲಸಿಕೆ ನೀಡುವುದಾಗಿ ಘೋಷಣೆ ಮಾಡಲಾಗಿತ್ತು. ಆದರೆ ಲಸಿಕೆಗಳ ಅಭಾವದಿಂದ 18-44 ವರ್ಷದವರಿಗೆ ಸಧ್ಯ ಲಸಿಕೆ ನೀಡಲಾಗುತ್ತಿಲ್ಲ. ಆದರೆ 45 ವರ್ಷ ಮೇಲ್ಪಟ್ಟ ಯಾರೋಬ್ಬರೂ ಉಳಿಯದಂತೆ ಕೂಡಲೇ ಎಲ್ಲರೂ ಸಮೀಪದ ಆರೋಗ್ಯ ಕೇಂದ್ರಗಳಿಗೆ ಅಥವಾ ನಮ್ಮ ಅಭಿಯಾನ ನಿಗದಿ ಪಡಿಸಿದ ಶಾಲೆಗಳಿಗೆ ಭೇಟಿ ನೀಡಿ, ಲಸಿಕೆ ಪಡೆದು ಕೊಳ್ಳಬೇಕು. ವಿಶೇಷವಾಗಿ ಯುವಕರು ತಮ್ಮ ಮನೆಯಲ್ಲಿನ, ಕುಟುಂಬ ವರ್ಗದವರ ಹಾಗೂ ತಮ್ಮ ಪ್ರದೇಶಗಳಲ್ಲಿನ 45ವರ್ಷ ಮೇಲ್ಪಟ್ಟ ಎಲ್ಲರೂ ಲಸಿಕೆ ಪಡೆದಿದ್ದಾರೆಯೇ? ಎಂಬುದನ್ನು ಗಮನ ಹರಿಸಬೇಕು ಎಂದು ಹೇಳಿದರು.


ಮಮದಾಪುರದ ವಿರಕ್ತಮಠದ ಶ್ರೀ ಅಭಿನವ ಮುರುಘೇಂದ್ರ ಸ್ವಾಮಿಗಳು, ಗ್ರಾಮದ ಮುಖಂಡರಾದ ಮಲ್ಲಿಕಾರ್ಜುನ ಗಂಗೂರ, ಲಕ್ಷ್ಮಣ ತೇಲಿ, ಅನೀಲ ನಾಯಕ ವೈದ್ಯಾಧಿಕಾರಿ ಡಾ. ಸಮೀರ ಜಂಬಗಿ, ಪಿಡಿಓ ಮಹೇಶ ಕಗ್ಗೊಡದವರ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇದಕ್ಕೂ ಮುನ್ನ ಎಂ. ಬಿ. ಪಾಟೀಲ ಅವರು, ಬಬಲೇಶ್ವರ ಹಾಗೂ ತಿಕೋಟಾ ಲಸಿಕಾ ಕೇಂದ್ರಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಲಸಿಕೆ ಪಡೆದುಕೊಳ್ಳಲು ಬರುವ ಎಲ್ಲರಿಗೂ ಲಘು ಪಾನೀಯ ಹಾಗೂ ಬಿಸ್ಕಟ್‍ಗಳನ್ನು ಒದಗಿಸಲು ವೈದ್ಯಾಧಿಕಾರಿಗಳಿಗೆ ಸೂಚಿಸಿದ ಅವರು ಅದಕ್ಕೆ ತಗಲುವ ಎಲ್ಲ ವೆಚ್ಚವನ್ನು ವೈಯಕ್ತಿಕವಾಗಿ ಭರಿಸುವುದಾಗಿ ಎಂ. ಬಿ. ಪಾಟೀಲ ಅವರು ತಿಳಿಸಿದರು.

Leave a Reply

ಹೊಸ ಪೋಸ್ಟ್‌