ಅಕೌಂಟಿಬಿಲಿಟಿ ಇದ್ದರೆ ರೆಮಿಡಿಸಿವಿರ್ ಅಕ್ರಮ ಮಾರಾಟಕ್ಕೆ ಕಡಿವಾಣ ಸಾಧ್ಯ- ಆಪತ್ತು ನಿರ್ಹವಣೆ ಸಲಕರಣೆ ಖರೀದಿಗೆ ಮತ್ತೆ ರೂ. 15 ಕೋ. ಬಳಕೆ- ಬಸವರಾಜ ಬೊಮ್ಮಾಯಿ

ಬೆಂಗಳೂರು: ಒಂದು ಅಕೌಂಟಿಬಿಲಿಟಿ ಇದ್ದರೆ ರೆಮಿಡಿಸಿವಿರ್ ಎಂಜೆಕ್ಷನ್ ಅಕ್ರಮ ಮಾರಾಟ ತಪ್ಪಿಸಲು ಸಾಧ್ಯ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಪ್ರಕೃತಿ ವಿಕೋಪ ನಿರ್ವಹಣೆ ಸಲಕರಣೆಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಬಳಿಕ ಮಾಧ್ಯದಮಗಳ ಜೊತೆ ಮಾತನಾಡಿದ ಅವರು, ರೆಮಿಡಿಸಿವಿರ್ ಅಕ್ರಮ ಮಾರಾಟ ತಪ್ಪಿಸಲು ಅಕೌಂಟಿಬಿಲಿಟಿ ಅಗತ್ಯವಾಗಿದೆ. ಒಂದು ಬ್ಯಾಚಿನ ಔಷಧಿ ಯಾರಿಗೆ, ಎಷ್ಟು ಜನರಿಗೆ ಹೋಗಿದೆ? ಎಷ್ಟು ಜನರಿಗೆ ಕೊಡಬೇಕು? ಎಷ್ಟು ಜನರಿಗೆ ನೀಡಲಾಗಿದೆ? ಎಂಬುದರ ಬಗ್ಗೆ ಲೆಕ್ಕ ಇರಬೇಕು. ಆರೋಗ್ಯ ಇಲಾಖೆ ಈ […]

ಲಸಿಕೆ ಅಭಿಯಾನ ಆಯ್ತು ಈಗ ಕೊರೊನಾ ವಾರಿಯರ್ಸ್ ಗೆ ನೆರವಿಗೆ ಧಾವಿಸಿದ ಶಾಸಕ ಯತ್ನಾಳ

ವಿಜಯಪುರ- ಕಳೆದ ಸುಮಾರು ಒಂದು ತಿಂಗಳಿಂದ ವಿಜಯಪುರ ಮತಕ್ಷೇತ್ರದ ಜನತೆಗೆ ಕೊರೊನಾ ಲಸಿಕೆ ಹಾಕಿಸಲು ಅಭಿಯಾನ ಕೈಗೊಂಡಿದ್ದ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಈಗ ಕೊರೊನಾ ವಾರಿಯರ್ಸ್ ನೆರವಿಗೆ ಧಾವಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕೊರೊನಾ ಮಾಹಾಮಾರಿಯ ಎರಡನೇ ಅಲೆಯಲ್ಲಿ ಸಾಕಷ್ಟು ಜನರು ತೀವ್ರ ತೊಂದರೆಯನ್ನು ಅನುಭವಿಸುತ್ತಿದ್ದಾರೆ. ಹೆಚ್ಚಿನ ರೋಗಿಗಗಳಿಗೆ ಪ್ರಾಣವಾಯು, ವೆಂಟಿಲೇಟರ್ ಗಳನ್ನು ಅವಲಂಬಿಸಬೇಕಾಗಿದೆ. ಇಂಥ ಸಂದಿಗ್ಧ ಪರಿಸ್ಥಿತಿತಿಯಲ್ಲಿಯೂ ಕೂಡ ಜೀವದ ಹಂಗು ತೊರೆದು ವಿಜಯಪುರ […]

ಕೋವಿಡ್ ಸೇವಾ ನಿರತ ವಿಜಯಪುರ ವೈದ್ಯೆಯ ಜೊತೆ ಸಿಎಂ ವಿಡಿಯೊ ಕಾನ್ಫರೆನ್ಸ್ ಮೂಲಕ ಸಮಾಲೋಚನೆ

ವಿಜಯಪುರ: ಕೋವಿಡ್-19 ನಿಯಂತ್ರಣ ಹಾಗೂ ಚಿಕಿತ್ಸೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ರಾಜ್ಯದ ನಾನಾ ಜಿಲ್ಲೆಗಳಲ್ಲಿ ರೋಗಿಗಳ ಚಿಕಿತ್ಸೆಯಲ್ಲಿ ನಿರತ ವೈದ್ಯರ ಜತೆ ವರ್ಚುವಲ್ ಸಭೆ ಮೂಲಕ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ವಿಜಯಪುರದ ವೈದ್ಯೆ ಡಾ. ಮೀನಾಕ್ಷಿ ಮುತ್ತಪ್ಪನವರ ಈ ವಿಡಿಯೋ ಸಂವಾದದಲ್ಲಿ ಭಾಗವಹಿಸಿದ್ದರು. ಬೆಂಗಳೂರಿನಲ್ಲಿರುವ ತಮ್ಮ ಗೃಹ ಕಚೇರಿ ಕೃಷ್ಣದಿಂದ ವರ್ಚುವಲ್ ಮೂಲಕ ವಿಡಿಯೋ ಸಂವಾದ ನಡೆಸಿದ ಮುಖ್ಯಮಂತ್ರಿಗಳು, ಡಾ.ಮೀನಾಕ್ಷಿ ಮುತ್ತಪ್ಪನವರಿಗೆ ಎಷ್ಟು ದಿನಗಳಿಂದ ಕೋವಿಡ್ ಕರ್ತವ್ಯ ನಿರ್ವಹಿಸುತ್ತಿದ್ದೀರಿ ಎಂದು ಪ್ರಶ್ನಿಸಿದರು. ಆಗ […]

4000 ಕೊರೊನಾ ವಾರಿಯರ್ಸ್, ಕೊವಿಡ್ ಕಾರ್ಯಪಡೆ ಪದಾಧಿಕಾರಿಗಳಿಗೆ ರೋಗ ನಿಯಂತ್ರಣ ಕುರಿತು ಯುಟ್ಯೂಬ್ ಮೂಲಕ ತಿಳಿವಳಿಕೆ

ವಿಜಯಪುರ: ಕೊರೊನಾ ಎರಡನೇ ಅಲೆ ಗ್ರಾಮೀಣ ಭಾಗಕ್ಕೆ ವ್ಯಾಪಕವಾಗಿ ಹರಡದಂತೆ ಬಸವ ನಾಡು ವಿಜಯಪುರ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಯ ಕೋವಿಡ್-19 ಕಾರ್ಯಪಡೆಯ ಸುಮಾರು 4000 ಜನ ಕೊರೊನಾ ವಾರಿಯರ್ಸ್, ಅಧ್ಯಕ್ಷರು ಮತ್ತು ಸದಸ್ಯರಿಗೆ ಯೂಟ್ಯೂಬ್ ಚಾನಲ್ ಮುಖಾಂತರ ಜಿಲ್ಲಾಧಿಕಾರಿ ಪಿ. ಸುನೀಲಕುಮಾರ, ಜಿ. ಪಂ. ಸಿಇಓ ಗೋವಿಂದ ರೆಡ್ಡಿ ಮತ್ತು ಆರೋಗ್ಯ ಇಲಾಖೆ ಹಿರಿಯ ತಜ್ಞ ವೈದ್ಯರ ನೇತೃತ್ವದಲ್ಲಿ ಏಕಕಾಲಕ್ಕೆ ತಿಳುವಳಿಕೆಯನ್ನು ನೀಡಲಾಯಿತು. ಕೊರೊನಾ ಎರಡನೇ ಅಲೆಯು ಹರಡದಂತೆ ಸರಪಳಿಯನ್ನು ತುಂಡರಿಸಲು ಈಗಾಗಲೇ ಸರಕಾರದಿಂದ ಕಟ್ಟುನಿಟ್ಟಾದ […]