ಲಾಕಡೌನ್ ವಿಸ್ತರಣೆ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಸಿಎಂ ನಿರ್ಧಾರ ಕೈಗೊಳ್ಳಲಿದ್ದಾರೆ- ಸಚಿವ ಬಸವರಾಜ ಬೊಮ್ಮಾಯಿ

ಶಿಗ್ಗಾವಿ: ರಾಜ್ಯದಲ್ಲಿ ಲಾಕಡೌನ್ ವಿಸ್ತರಣೆಗೆ ಸಂಬಂಧಿಸಿದಂತೆ ಕೋವಿಡ್ ಟಾಸ್ಕ್ ಫೋರ್ಸ್ ಒಂದೆರಡು ದಿನಗಳಲ್ಲಿ ಸಿಎಂ ಗೆ ಸಂಪೂರ್ಣ ಮಾಹಿತಿ ನೀಡಲಿದೆ‌ ವರದಿ ನೀಡಲಿದೆ. ಆ ಮಾಹಿತಿಯ ಆಧಾರದ ಮೇಲೆ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಸಿಎಂ ಬಿ. ಎಸ್. ಯಡಿಯೂರಪ್ಪ ಜೊತೆ ಶಿಗ್ಗಾವಿಯಿಂದ ವಿಡಿಯೋ ಕಾನ್ಪರೆನ್ಸ್ ನಲ್ಲಿ ಭಾಗವಹಿಸಿ ಹಾವೇರಿ ಜಿಲ್ಲೆಯ ಕೊರೊನಾ ಸ್ಥಿತಿಗತಿ ಕುರಿತು ವಿವರಿಸಿದ ನಂತರ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

ಮುಖ್ಯಮಂತ್ರಿಗಳು ರಾಜ್ಯದಲ್ಲಿ ಜಿಲ್ಲಾಧಿಕಾರಿ ಮತ್ತು ಇತರ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದಿದ್ದಾರೆ. ಕೋವಿಡ್ ಕಾರ್ಯಪಡೆ ಸದ್ಯದ ಪರಿಸ್ಥಿತಿ ಕುರಿತು ಸಿಎಂಗೆ ವಿವರಣೆ ನೀಡಲಿದೆ. ಸದ್ಯದಲ್ಲಿಯೇ ಸಚಿವ ಸಂಪುಟ ಸಭೆ ನಡೆಯುವುದರಿಂದ ಮುಖ್ಯಮಂತ್ರಿಗಳು ಲಾಕಡೌನ್ ವಿಸ್ತರಣೆ ಸಂಬಂಧ ಅಲ್ಲಿಯೇ ನಿರ್ಧಾರ ಕೈಗಳು ಸಾಧ್ಯತೆಯಿದೆ ಎಂದು ಅವರು ತಿಳಿಸಿದರು.

ಲಾಕಡೌನ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ಬಡವರಿಗೆ ಪ್ಯಾಕೇಜ್ ಘೋಷಣೆ ಮಾಡುವ ಕುರಿತು ಸಿಎಂ ಆರ್ಥಿಕ ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ ಎಂದು ಅವರು ಹೇಳಿದರು.

ಎರಡು ಕೊರೊನಾ ಕೋಟಿ ಲಸಿಕೆಗಾಗಿ ಗ್ಲೋಬಲ್ ಟೆಂಡರ್ ಕರೆಯಲಾಗಿದೆ. ಅದು ಬಂದ ನಂತರ ಲಸಿಕೆ ಅಭಿಯಾನವನ್ನು ತೀವ್ರಗೊಳಿಸಲಾಗುವುದು.‌ ಹೋಂ ಐಸೋಲೇಶನ್ ಆಗಿರುವ ಕೊರೊನಾ ಸೋಂಕಿತರ ಮೇಲೆ ನಿಗಾ ಇರಿಸಲು ಸೂಚಿಸಲಾಗಿದೆ. ಸೋಂಕಿತರ ಆರೋಗ್ಯವನ್ನು ಗಮನಿಸಿ ಅವರನ್ನು ಕೋವಿಡ್ ಕೇರ್ ಸೆಂಟರ್ ಗೆ ಕರೆ ತರುವಂತೆ ಸೂಚಿಸಲಾಗಿದೆ. ಶಿಗ್ಗಾವಿ ತಾಲೂಕಾಸ್ಪತ್ರೆಯಲ್ಲಿ ಹೆಚ್ಚುವರಿಯಾಗಿ ನೂರಕ್ಕೂ ಹೆಚ್ಚು ಆಕ್ಸಿಜನ್ ವ್ಯವಸ್ಥೆ ಇರುವ ಹಾಸಿಗೆಗಳನ್ನು ಸಿದ್ಧಪಡಿಸುವಂತೆ ಸೂಚಿಸಲಾಗಿದೆ. ಸರಕಾರದ ವತಿಯಿಂದ 25 ಆಕ್ಸಿಜನ್ ಕಾನ್ಸಂಟ್ರೇಟರಗಳನ್ನು ತಾಲೂಕು ಆಸ್ಪತ್ರೆಗೆ ಹಸ್ತಾಂತರಿಸಲಾಯಿತು ಗೃಹ ಸಚಿವ ಬಸವರಾಜ ಬೊಮ್ನಾಯಿ ತಿಳಿಸಿದರು.‌

ಈ ಸಂದರ್ಭದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ವಿಧಾನ ಪರಿಷತ ಬಿಜೆಪಿ ಸದಸ್ಯ ಪ್ರದೀಪ ಶೆಟ್ಟರ ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌