ದೌರ್ಜನ್ಯ ಪೀಡಿತ ಯುವತಿಯರ ಕುಟುಂಬಗಳಿಗೆ ವಿಜಯಪುರ ಜಿಲ್ಲಾಡಳಿತದಿಂದ ಪರಿಹಾರ ಧನ ವಿತರಣೆ

ವಿಜಯಪುರ: ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಿನ ಕುದರಿ ಸಾಲವಾಡಗಿ ಗ್ರಾಮದಲ್ಲಿ ದೌರ್ಜನ್ಯಕ್ಕೆ ಒಳಗಾದ ಇಬ್ಬರು ಯುವತಿಯರ ಕುಟುಂಬವನ್ನು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ, ದೇವರ ಹಿಪ್ಪರಗಿ ಬಿಜೆಪಿ ಶಾಸಕ ಸೋಮನಗೌಡ ಪಾಟೀಲ(ಸಾಸನೂರ), ಎಸ್ಪಿ ಅನುಪಮ ಅಗ್ರವಾಲ್ ಭೇಟಿ ಮಾಡಿ ಸಾಂತ್ವನ ಹೇಳಿದರು.
ಅಲ್ಲದೇ, ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತ ಕುಟುಂಬದವರಿಗೆ ಸಾಂತ್ವನ ಹೇಳಿ, ಪರಿಹಾರ ಧನ ಚೆಕ್ ವಿತರಿಸಿದರು. ಸರಕಾರದ ವತಿಯಿಂದ ರೂ. 8.25 ಲಕ್ಷ ಮಂಜೂರಾಗಿದ್ದು, ದೌರ್ಜನ್ಯಕ್ಕೆ ಒಳಗಾಗಿದ್ದ ಎರಡು ಕುಟುಂಬಗಳಿಗೆ ಪರಿಹಾರಧನ ಚೆಕ್ ವಿತರಿಸಿದರು. ಸರಕಾರದಿಂದ ನೀಡಲಾಗುವ ಪರಿಹಾರ ಧನದಲ್ಲಿ ಅರ್ಧದಷ್ಟು ಅಂದರೆ ಪ್ರತಿ ಕುಟುಂಬಕ್ಕೆ ತಲಾ ರೂ. 412500 ಚೆಕ್ ವಿತರಿಸಲಾಯಿತು.


ಕುದರಿ ಸಾಲವಾಡಗಿ ಗ್ರಾಮದಲ್ಲಿ ದೌರ್ಜನ್ಯಕ್ಕೆ ಒಳಗಾಗಿದ್ದ ಇಬ್ಬರು ಬಾಲಕಿಯರ ಕುಟುಂಬಸ್ಥರಾದ ಶಿವರಾಜ ಕಳ್ಳಿಮನಿ ಹಾಗೂ ಗೌರವ್ವ ಕಳ್ಳಿಮನಿ ಕುಟುಂಬಗಳಿಗೆ ಪರಿಹಾರ ಧನ ಚೆಕ್ ವಿತರಿಸಲಾಯಿತು. ದೇವರ ಹಿಪ್ಪರಗಿ ಶಾಸಕ ಸೋಮನಗೌಡ ಪಾಟೀಲ(ಸಾಸನೂರ). ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಮನಗೌಡ ಮತ್ತು ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌