ನಾನಾ ಸಂಘ-ಸಂಸ್ಥೆಗಳು, ಸಾರ್ವಜನಿಕರು ನೀಡಿದ ಆಕ್ಸಿಜನ್ ಕಾನ್ಸಂಟ್ರೇಟರ್ ಸರಕಾರಿ ಆಸ್ಪತ್ರೆಗಳಿಗೆ ಹಂಚಿಕೆ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸರಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೊನಾ ರೋಗಿಗಳಿಗೆ ಆಮ್ಲಜನಕದ ಅವಶ್ಯಕತೆ ಇದೆ. ಈ ಹಿನ್ನೆಲೆಯಲ್ಲಿ ಹಲವಾರು ಸಂಘ ಸಂಸ್ಥೆಗಳು ಮತ್ತು ಸಾರ್ವಜನಿಕರಿಂದ ಕೊಡುಗೆಯಾಗಿ ನೀಡಿದ ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ಜಿಲ್ಲೆಯ ನಾನಾ ಸರಕಾರಿ ಆಸ್ಪತ್ರೆಗಳಿಗೆ ಹಂಚಿಕೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲಕುಮಾರ ತಿಳಿಸಿದ್ದಾರೆ.

ಮೇ 19ರ ವರೆಗೆ ನಾನಾ ದಾನಿಗಳಿಂದ, ಸಂಘ-ಸಂಸ್ಥೆಗಳಿಂದ ಸ್ವೀಕರಿಸಲಾದ ಹಾಗೂ ಕಚೇರಿಯಿಂದ ಖರೀದಿಸಲಾದ ಆಕ್ಸಿಜನ್ ಕಾನ್ಸಂಟ್ರೇಟರ್ ಮತ್ತು ವೆಂಟಿಲೇಟರ್ಸ ಗಳನ್ನು ಜಿಲ್ಲೆಯ ನಾನಾ ಸರಕಾರಿ ಆಸ್ಪತ್ರೆಗಳಿಗೆ ವಿತರಣೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಭಾರತೀಯ ರೆಡ್ ಕ್ರಾಸ್ ಸಂಸ್ಥೆಯಿಂದ ನೀಡಲಾದ ಎರಡು ಆಕ್ಸಿಜನ್ ಕಾನ್ಸಂಟ್ರೇಟರ್ ಮತ್ತು ಒಂದು ವೆಂಟಿಲೇಟರ್ ಗಳನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ಹಂಚಿಕೆ ಮಾಡಲಾಗಿದೆ.

ಉಡುಪಿಯ ಫ್ಯಾಮಿಲಿ ಟ್ರಸ್ಟ್ ನ ಜೆ. ಎಸ್. ಶಂಕರ್ ವತಿಯಿಂದ ನೀಡಿದ 10 ಆಕ್ಸಿಜನ್ ಕಾನ್ಸಂಟ್ರೇಟರ್ ಗಳಲ್ಲಿ ಇಂಡಿ ತಾಲೂಕಾಸ್ಪತ್ರೆಗೆ 06 ಮತ್ತು ಸಿಂದಗಿ ತಾಲೂಕಾಸ್ಪತ್ರೆಗೆ 04 ರಂತೆ ನೀಡಲಾಗಿದೆ.

ಸತೀಶ್ ಅಂಬಾಟಿ ಫೌಂಡರ್ ಮತ್ತು ಸಿ ಇ ಒ H2O ಮೌಂಟೇನ್ ವ್ಯೂ ಕ್ಯಾಲಿಫೋರ್ನಿಯ ಯಿಂದ ನೀಡಿದ ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ಬಸವನ ಬಾಗೇವಾಡಿ ತಾಲೂಕಾಸ್ಪತ್ರೆಗೆ 5 ಮತ್ತು 5 ಮುದ್ದೇಬಿಹಾಳ ತಾಲೂಕಾಸ್ಪತ್ರೆಗೆ 5 ರಂತೆ ವಿತರಿಸಲಾಗಿದೆ.

ಡೋರ್ರೆನ್ 304 ಪ್ರೆಸ್ಟೀಜ್ ಪೆಂಟಾ ಈವಾ ಮಾಲ್ ದಿಂದ ಜಿಲ್ಲಾಡಳಿತವು ಖರೀದಿ ಮಾಡಿದ 10 ಆಕ್ಸಿಜನ್ ಕಾನ್ಸಂಟ್ರೇಟರ್ ವಿಜಯಪುರ ಜಿಲ್ಲಾಸ್ಪತ್ರೆಗೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ‌ ಪಿ. ಸುನೀಲ ಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

ಹೊಸ ಪೋಸ್ಟ್‌