ಗ್ರಾಮೀಣ ಭಾಗದಲ್ಲಿ ಕೊರೊನಾ ನಿಯಂತ್ರಣಕ್ಕೆ ಬೀಟ್ ಪೋಲಿಸರ ಭೇಟಿ ಹೆಚ್ಚಿಸಲು ಸಚಿವೆ ಜೊಲ್ಲೆ ಸೂಚನೆ

ವಿಜಯಪುರ: ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗಿ ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ‌ ಪೊಲೀಸ್ ಇಲಾಖೆಯ ಬೀಟ್ ಸಿಬ್ಬಂದಿಗಳು ನಿರಂತರ ಆಯಾ ಗ್ರಾಮದಲ್ಲಿ ಪರಿಶೀಲಿಸಬೇಕು. ಅಲ್ಲದೇ ಗ್ರಾಮ ಪಂಚಾಯಿತಿ ಮಟ್ಟದ ಕಾರ್ಯಪಡೆಗಳಿಗೆ ನೆರವಾಗುವಂತೆ ನೋಡಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಜಯಪುರದಲ್ಲಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಕೊರೊನಾ ನಿಯಂತ್ರಣ ಕುರಿತು ಪರಿಶೀಲನೆ ಸಭೆ ನಡೆಸಿದ ಅವರು, […]

ಪೊಲೀಸ್ ಕುಟುಂಬದವರಿಗೂ ಕೊರೊನಾ ಲಸಿಕೆ- ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ಶೇ. 95 ರಷ್ಟು ಸಿಬ್ಬಂದಿಗೆ ಈಗಾಗಲೇ ಕೊರೊನಾ ಲಸಿಕೆ ಹಾಕಲಾಗಿದ್ದು, ಮುಂದಿನ ದಿನಗಳಲ್ಲಿ ಎರಡನೇ ಹಂತದಲ್ಲಿ ಪೊಲೀಸ್ ಸಿಬ್ಬಂದಿಯ ಕುಟುಂಬದವರಿಗೂ ಕೊರೊನಾ ಲಸಿಕೆ ನೀಡಲಾಗುವುದು ಎಂದು ಗೃಹ, ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ‌. ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ಸಚಿವರಾದ ಆರ್. ಅಶೋಕ್ ಮತ್ತು ಡಾ. ಕೆ ಸುಧಾಕರ್ ಜೊತೆ ಭೇಟಿ ನೀಡಿ ಬ್ಲಾಕ್ ಫಂಗಸ್ ಸೋಂಕಿನ ಕುರಿತು ವೈದ್ಯಾಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ ಬಳಿಕ […]

ಬಸವ ನಾಡಿನಲ್ಲಿ ಶ್ರೀ ಸಾಯಿ ಸೇವಾ ಸಮಿತಿಯಿಂದ ಸದ್ದಿಲ್ಲದೆ ನಡೆದಿದೆ ಕೊರೊನಾ ಸೋಂಕಿತರ ಸೇವೆ

ವಿಜಯಪುರ: ಬಸವ ನಾಡಿನಲ್ಲಿ ಸದ್ದಿಲ್ಲದೆ ಕೊರೊನಾ ರೋಗಿಗಳ ಸೇವೆ ಮಾಡುವ ಮೂಲಕ ಶ್ರೀ ಸಾಯಿ ಸೇವಾ ಸಮಿತಿ ಗಮನ ಸೆಳೆದಿದೆ. ಕೊರೊನಾ ಸಂಕಷ್ಟ ಸಮಯದಲ್ಲಿ ನಾನಾ ಸಂಘಟನೆಗಳು, ವ್ಯಕ್ತಿಗಳು ಹಲವಾರು ರೀತಿಯಲ್ಲಿ ತಮ್ಮದೇ ಆದ ಸಮಾಜ ಸೇವೆ ಮಾಡುತ್ತ ಜನಪರ ಕೆಲಸದಲ್ಲಿ ನಿರತರಾಗಿದ್ದಾರೆ. ಆದರೆ, ಶ್ರೀ ಸಾಯಿ ಸೇವಾ ಸಮಿತಿ ಮಾತ್ರ ವಿನೂತನ ಕೊರೊನಾ ಸೋಂಕಿತರಿಗೆ ವಿಶೇಷ ಗಮನ ಹರಿಸುವ ಮೂಲಕ ಸಮಾಜಮುಖಿ ಕೆಲಸದಲ್ಲಿ ತೊಡಗಿಸಿಕೊಂಡಿದೆ. ಕಳೆದ ಒಂದು ವಾರದಿಂದ ವಿಜಯಪುರದ ಪ್ರತಿಷ್ಠಿತ ಬಿ ಎಲ್ ಡಿ […]

ಸ್ವಾಮೀಜಿ ಆಡಿಯೋ ಅಪಾರ್ಥ ಮಾಡಿಕೊಂಡ ಜನ- ಮದ್ಯ ನೈವೇದ್ಯ ಅರ್ಪಿಸುವ ಹೆಸರಾಂತ ಮಠಕ್ಕೆ ಲಾಕಡೌನ್ ಮಧ್ಯೆ ಅಂಬಲಿಯೊಂದಿಗೆ ಗುಂಪಾಗಿ ಬಂದ ಭಕ್ತರು

ವಿಜಯಪುರ: ಇದು ಜನ ಮರಳೋ ಜಾತ್ರೆ ಮರಳೋ ಎಂಬುದಕ್ಕೆ ತಾಜಾ ಉದಾಹರಣೆ. ಜಾತ್ರೆಯ ಸಂದರ್ಭದಲ್ಲಿ ಮದ್ಯದ ನೈವೇದ್ಯ ಬೇಡ ಬೇಡ ಎಂದು ಕಾರ್ಣಿಕ ಹೇಳಿದರೂ ಕೇಳದ ಜನ ಈಗ ಕೊರೊನಾ ಲಾಕಡೌನ್ ಸಂದರ್ಭದಲ್ಲಿ ನಾನಾ ಗ್ರಾಮಗಳಿಂದ ಅಂಬಲಿಯೊಂದಿಗೆ ನೈವೇದ್ಯ ಅರ್ಪಿಸಲು ಬಂದು ಪೊಲೀಸರಿಂದ ಬುದ್ಧಿಹೇಳಿಸಿಕೊಂಡ ಕಥೆಯಿದು. ಅಷ್ಟಕ್ಕೂ ಆಗಿದ್ದೇನೆಂದರೆ, ಎರಡು ವರ್ಷಗಳ ಹಿಂದೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಹೊಳೆಬಬಲಾದಿ ಸದಾಶಿವ ಮಠದ ಕಾರ್ಣಿಕ ಮತ್ತು ಸ್ವಾಮೀಜಿ ಸಿದ್ಧರಾಮಯ್ಯ ಹೊಳಿಮಠ ಅವರು ಭವಿಷ್ಯ ವೈದ್ಯರಿಗೂ ತಿಳಿಯದ ರೋಗ […]

ಕೊರೊನಾ ಗೆದ್ದವರು- ಒಂದೇ ಕುಟುಂಬದ ಐವರು

ವಿಜಯಪುರ: ಇದು ಬಸವ ನಾಡಿನಲ್ಲಿ ಒಂದೇ ಕುಟುಂಬದ ಐದು ಜನ ಕೊರೊನಾ ವಿರುದ್ಧ ಸೆಣಸಾಡಿ ಗೆದ್ದ ಸ್ಟೋರಿ. ಮೊದಲಿಗೆ ಮೂರು ಜನ ಸಹೋದರರಲ್ಲಿ ಮೂರನೇಯರಿಗೆ ಸೋಂಕು ತಗುಲಿ ಮನೆಯಲ್ಲಿಯೇ ಐಸೋಲೇಟ್ ಆಗಿ ಚಿಕಿತ್ಸೆ ಪಡೆದು ಗುಣಮುಖರಾದರೆ. ಇನ್ನುಳಿದ ನಾಲ್ಕು ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಇದು ವಿಜಯಪುರ ನಗರದ ಜಲನಗರದಲ್ಲಿ ವಾಸಿಸುವ ಕುಮಾನಿ ಕುಟುಂಬದ ಕಥೆ. ಈ ಕುಟುಂಬದಲ್ಲಿ ಮೂರು ಜನ ಸಹೋದರರು ಮತ್ತು ಇಬ್ಬರು ಸೊಸೆಯಂದಿರಿಗೆ ಕೊರೊನಾ ಸೋಂಕು ತಗುಲಿತ್ತು. ಈಗ ಎಲ್ಲರೂ ಗುಣಮುಖರಾಗಿ […]