ಕೂಡಗಿ ಎನ್ ಟಿ ಪಿ ಸಿ, ಪವನ ವಿದ್ಯುತ್ ಕಂಪನಿಗಳ ವಿರುದ್ಧ ಬಸವ ಸೈನ್ಯ ಸಂಸ್ಥಾಪಕ ಶಂಕರಗೌಡ ಬಿರಾದಾರ ಅಸಮಾಧಾನ

ವಿಜಯಪುರ: ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನಲ್ಲಿರುವ ಕೂಡಗಿಯ ಎನ್ ಟಿ ಪಿ ಸಿ ಮತ್ತು ಬಸವನ ಬಾಗೇವಾಡಿ ಸುತ್ತಮುತ್ತಲಿರುವ ಪವನ ವಿದ್ಯುತ್ ಕಂಪೆನಿಗಳು ಜನರಿಗೆ ಮೋಸ ಮಾಡುತ್ತಿವೆ ಎಂದು ರಾಷ್ಟ್ರೀಯ ಬಸವ ಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಆರೋಪಿಸಿದ್ದಾರೆ ಕರೊನಾ ರೋಗದಿಂದ ಇಡೀ ಮನುಕುಲವೇ ತತ್ತರಿಸಿ ಹೋಗಿದೆ. ಸಾಕಷ್ಟು ಜನರು ಜೀವ ಕಳೆದುಕೊಂಡಿದ್ದಾರೆ. ಅಲ್ಲದೇ, ಬಸವನ ಬಾಗೇವಾಡಿ ತಾಲೂಕಿನಲ್ಲಿ ಸಾವಿರಾರು ಜನ ನಿರ್ಗತಿಕರಾಗಿದ್ದಾರೆ. ಆದರೆ, ಎನ್ ಟಿ ಪಿ ಸಿ ಮತ್ತು ಪವನ ವಿದ್ಯುತ್ […]

ಸಿಎಂ ಬದಲಾವಣೆ ಕುರಿತು ಮತ್ತೆ ಯತ್ನಾಳ ಹೊಸ ಬಾಂಬ್- ಜೂ. 15ರೊಳಗೆ ಸಿಎಂ ಬದಲಾಗ್ತಾರೆ ಇಲ್ಲವೇ ಯೋಗೇಶ್ವರ ಡಿಸಿಎಂ ಆಗ್ತಾರೆ

ವಿಜಯಪುರ: ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮತ್ತು ಅವರ ಪುತ್ರ ಬಿ. ವೈ. ವಿಜಯೇಂದ್ರ ವಿರುದ್ಧ ಸದಾ ವಾಗ್ದಾಳಿ ನಡೆಸುವ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಈಗ ಮತ್ತೆ ಹೊಸ ಬಾಂಬ್ ಸಿಡಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಜೂ. 15ರೊಳಗೆ ಒಂದು ಸಿಎಂ ಬದಲಾಗುತ್ತಾರೆ. ಇಲ್ಲದಿದ್ದರೆ, ಸಿ. ಪಿ. ಯೋಗೇಶ್ವರ ಅವರಿಗೆ ಡಿಸಿಎಂ ಮಾಡಿ ಇಂಧನ ಖಾತೆ ನೀಡಬೇಕಾಗುತ್ತದೆ ಎಂದು ಭವಿಷ್ಯ ನುಡಿದರು. ಯೋಗಿಶ್ವರ ಅವರನ್ನು ತೆಗೆದು ಹಾಕುವ ಅಥವಾ ಉಚ್ಚಾಟನೆ ಮಾಡುವ […]

ಸ್ವತಃ ಕಷ್ಟದಲ್ಲಿದ್ದರೂ ಮಾನವೀಯತೆ ಮೆರೆದ ರೈತನಿಗೆ ಶಾಸಕ ಎಂ. ಬಿ. ಪಾಟೀಲ ನೆರವು

ವಿಜಯಪುರ- ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಂಗಾಪುರ ಎಸ್. ಎಚ್. ಗ್ರಾಮದ ರೈತ ಬಸವರಾಜ ಕಾತ್ರಾಳ ತಮ್ಮ ಮೂರು ಎಕರೆ ಜಮೀನಿನಲ್ಲಿ ಐದು ಸಾವಿರ ಬಾಳೆ ಸಸಿಗಳನ್ನು ನೆಟ್ಟು, ಪೋಷಿಸಿದ್ದರು. ಆದರೆ, ಲಾಕ್‍ಡೌನ್ ಹಿನ್ನೆಲೆಯಲ್ಲಿ ಬಾಳೆಹಣ್ಣುಗಳನ್ನು ಮಾರುಕಟ್ಟೆಗೆ ತಲುಪಿಸಲು ಸಾಧ್ಯವಾಗದೆ ಸಂಕಷ್ಟಕ್ಕೊಳಗಾಗಿದ್ದರು. ಇಂಥ ಸಂದಿಗ್ಧತೆಯ ನಡುವೆಯೂ ಮಾನವೀಯತೆಗೆ ಮುಂದಾದ ರೈತ ಇತರ ರೈತರಿಗೆ ಮಾದರಿಯಾಗಿದ್ದಾರೆ. ಮಾರುಕಟ್ಟೆ ಇಲ್ಲದೆ ಹಾಳಾಗುತ್ತಿದ್ದ ತಮ್ಮ ಬಾಳೆ ಬೆಳೆಯನ್ನು ಸುತ್ತಲಿನ ಹಳ್ಳಿಗಳ ರೈತರಿಗೆ ಉಚಿತವಾಗಿ ನೀಡವುದರ ಜೊತೆಗೆ ಮಾಸ್ಕ ಹಾಗೂ ಸೈನಿಟೈಸರ್ ವಿತರಿಸುತ್ತ […]

ವಿಶ್ವ ತಂಬಾಕು ರಹಿತ ದಿನಾಚರಣೆ ಬಗ್ಗೆ ಹೋಮಿಯೋಪಥಿ ವೈದ್ಯರ ಸಲಹೆಗಳು

ಡಾ. ರವಿ. ಎಸ್. ಕೋಟೆಣ್ಣವರ,ಹೋಮಿಯೋಪಥಿ ವೈದ್ಯರು ವಿಜಯಪುರ: ವಿಶ್ವ ಆರೋಗ್ಯ ಸಂಸ್ಥೆಯು ಪ್ರತೀ ವರ್ಷ ಮೇ 31 ರಂದು ವಿಶ್ವ ತಂಬಾಕು ರಹಿತ ದಿನಾಚಾರಣೆ ಘೋಷಣೆ ಮಾಡಿದ್ದು, ಇದನ್ನು ವಿಶ್ವಾದ್ಯಂತ ಆಚರಿಸಲಾಗುತ್ತಿದೆ. ಈ ದಿನದಂದು ಒಂದು ಘೋಷ ವಾಖ್ಯವನ್ನು ನೀಡಿ ಈ ನಿಟ್ಟಿನಲ್ಲಿ ವರ್ಷವಿಡಿ ಸರಕಾರ ಮತ್ತು ಸರಕಾರ ಹೊರತಾದ ಸಂಘ-ಸಂಸ್ಥೆಗಳು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಈ ವರ್ಷದ ಘೋಷ ವಾಖ್ಯ ತ್ಯಜಿಸಲು ಬದ್ಧರಾಗಿ ಎಂಬುದಾಗಿದೆ. ಈಗಾಗಲೇ ಕೊರೊನಾ ಎರಡನೇ ಅಲೆ ಆರಂಭವಾಗಿದ್ದು, ಇದರ […]