ಸೋಮವಾರದಿಂದ ಲಾಕ್ ಡೌನ್ ಸಡಿಲಿಕೆ- ವಿಜಯಪುರದಲ್ಲಿ ಏನಿರುತ್ತೆ? ಏನಿರಲ್ಲ- ಡಿಸಿ ಮಾಹಿತಿ

ವಿಜಯಪುರ: ರಾಜ್ಯ ಸರಕಾರ ನಾಳೆಯಿಂದ ಲಾಕಡೌನ್ ಸಡಿಲಿಕೆ ಮಾಡಿದ್ದು, ವಿಜಯಪುರ ಜಿಲ್ಲೆಯಲ್ಲಿ ಏನಿರುತ್ತೆ? ಏನಿರಲ್ಲ? ಎಂಬುದರ ಕುರಿತು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಮಾಹಿತಿ ನೀಡಿದ್ದಾರೆ.

ಪರಿಷ್ಕೃತ ಮಾರ್ಗಸೂಚಿಯಂತೆ ಮಾರ್ಗಸೂಚಿ ಪ್ರಮುಖ ಅಂಶಗಳು ಈ ಕಳಗಿನಂತಿವೆ

ಜೂ. 14ರ ಬೆ. 6ರಿಂದ ಜೂ. 21ರ ಬೆಳಿಗ್ಗೆ 6 ರವರೆಗೆ ಈ ಮಾರ್ಗಸೂಚಿಗಳು ಜಾರಿಯಲ್ಲಿರಲಿವೆ. ಜಿಲ್ಲೆಯ ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಅಗತ್ಯ ವಸ್ತುಗಳ ಮಾರಾಟಕ್ಕೆ ಬೆ. 6 ರಿಂದ ಮ. 2ರ ವರೆಗೆ ಕಾಲಾವಕಾಶವಿದೆ. ಆಹಾರ, ಬೇಳೆಕಾಳು,ಹಣ್ಣು, ತರಕಾರಿ, ಮಾಂಸ,ಮೀನು, ಮಾಂಸ,ಡೇರಿ,ಮಿಲ್ಕ ಬೂತ್,ಪಶು ಮೇವುಗಳಿಗೆ ಈ ಅವಧಿಯಲ್ಲಿ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ.

ಬೀದಿ ಬದಿ ವ್ಯಾಪಾರಕ್ಕೂ ಬೆ. 6 ರಿಂದ ಮ. 2ರ ವರೆಗೆ ಅವಕಾಶ ನೀಡಲಾಗಿದೆ. ಪ್ರಯಾಣಿಕರ ಸಂಚಾರಕ್ಜಾಗಿ ಆಟೋ, ಟ್ಯಾಕ್ಸಿಗಳಿಗೆ ಅವಕಾಶ ನೀಡಲಾಗಿದ್ದು, ಇಬ್ಬರು ಮಾತ್ರ ಪ್ರಯಾಣಿಸಬಹುದು. ನಿರ್ಮಾಣ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದ್ದು ಸಿಮೆಂಟ್ ಕಬ್ಬಿಣದ ಅಂಗಡಿಗಳಿಗೆ ಅವಕಾಶ ನೀಡಲಾಗಿದೆ.

ಗಾರ್ಮೆಂಟ್ಸ್ ಕಾರ್ಖಾನೆಗಳಲ್ಲಿ ಕೆಲಸ ಮಾಡಲು ಶೇ. 30 ರಷ್ಟು ಜನರಿಗೆ ಅವಕಾಶವಿದ್ದು, ಉಳಿದ ಕಾರ್ಖಾನೆಗಳಿಗೆ ಶೇಕಡ 50ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯಾಚರಣೆಗೆ ಅವಕಾಶ ಕಲ್ಪಿಸಲಾಗಿದೆ.

ಪಾರ್ಕ್ ಗಳಲ್ಲಿ ಬೆ. 5 ರಿಂದ ಬೆ. 10 ಗಂಟೆಯವರೆಗೆ ವಾಯು ವಿಹಾರ, ಜಾಗಿಂಗಗಾಗಿ ಅವಕಾಶ ಕಲ್ಪಿಸಲಾಗಿದೆ.

ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಕೌಶಲ್ಯ ತರಬೇತಿಗಳಿಗೆ ಅವಕಾಶ ನೀಡಲಾಗಿದೆ. ಕನ್ನಡಕ ಶಾಪ್ ಗಳು ಬೆ. 6 ರಿಂದ ಮ. 2 ಗಂಟೆಗೆವರೆಗೆ ತೆರೆಯಬಹುದಾಗಿದೆ.

ಪ್ರಮುಖ ಸರಕಾರಿ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸಲು ಶೇ. 50ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯ ನಿರ್ವಹಣೆಗೆ ಅವಕಾಶ ನೀಡಲಾಗಿದೆ.

ಕೆಲವೊಂದುಗಳಿಗೆ ನಿರ್ಬಂಧ ವಿಧಿಸಲಾಗಿದ್ದು ಅವುಗಳು ಈ ಕೆಳಗಿನಂತಿವೆ.

ಅಗತ್ಯ ವಸ್ತು ಹೊರತುಪಡಿಸಿ ಉಳಿದ ವಾಣಿಜ್ಯ ಚಟುವಟಿಕೆಗಳಿಗೆ ನಿರ್ಬಂಧವಿದೆ. ಕೆಎಸ್ಆರ್ ಟಿಸಿ, ಖಾಸಗಿ ಬಸ್ ಸಂಚಾರಕ್ಕೆ ಅವಕಾಶವಿಲ್ಲ. ಈಜುಕೊಳ, ಜಿಮ್, ಸಿನಿಮಾ ಮಂದಿರಗಳು, ಮಾಲ್, ಧಾರ್ಮಿಕ ಕೇಂದ್ರಗಳಿಗೆ ನಿರ್ಬಂಧ ವಿಧಿಸಲಾಗಿದೆ. ರಾಜಕೀಯ ಧಾರ್ಮಿಕ ಸಾಂಸ್ಕೃತಿಕ ಸಮಾರಂಭಗಳಿಗೂ ನಿರ್ಬಂಧ ಹೇರಲಾಗಿದೆ.

ಖಾಸಗಿ ಅಗತ್ಯ ಸೇವೆ ವ್ಯಾಪ್ತಿಗೆ ಬಾರದ ಸರಕಾರಿ ಕಚೇರಿಗಳಿಗೆ ನಿರ್ಬಂಧ ವಿಧಿಸಲಾಗಿದೆ. ಈ ಮೊದಲು ನಿಗದಿತ ಮದುವೆಗಳನ್ನು ಮನೆಯಲ್ಲಿ ಮಾತ್ರ ನೆರವೇರಿಸಬಹುದಾಗಿದ್ದು, 40 ಜನ ಸಂಬಂಧಿಗಳಿಗೆ ಮಾತ್ರ ಅವಕಾಶವಿದೆ.

ಶವಸಂಸ್ಕಾರ ಅಥವಾ ಅಂತ್ಯಕ್ರಿಯೆ ವೇಳೆ ಐದು ಜನರಿಗೆ ಮಾತ್ರ ಅವಕಾಶವಿದೆ .

ರಾಜ್ಯ ವ್ಯಾಪ್ತಿ ರಾತ್ರಿ ಹಾಗೂ ವಾರಂತ್ಯ ಕರ್ಫ್ಯೂ ಜಾರಿಯಲ್ಲಿರುತ್ತದೆ. ಜೂ. 14 ರಿಂದ ಜೂ. 21ರವರೆಗೆ ರಾತ್ರಿ ಮತ್ತು, ವಾರಾಂತ್ಯದ ಕರ್ಫ್ಯೂ ರಾಜ್ಯವ್ಯಾಪ್ತಿ ಏಕರೂಪವಾಗಿ ಜಾರಿಯಲ್ಲಿರುತ್ತದೆ. ರಾತ್ರಿ 7 ರಿಂದ ಬೆ. 5 ವರೆಗೆ ಕೊರೊನಾ ಕರ್ಫ್ಯೂ ಜಾರಿಯಲ್ಲಿರುತ್ತದೆ. ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾ. 7 ರಿಂದ ಸೋಮವಾರ ಬೆ.5 ರ ವರೆಗೆ ಜಾರಿಯಲ್ಲಿರುತ್ತದೆ.

ಈ ವೇಳೆ ರೋಗಿಗಳು .ತ್ತು ಅವರ ಸಹಾಯಕರ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದ್ದು, ರಾತ್ರಿ ಕಾರ್ಯಾಚರಣೆ ಅಗತ್ಯವಿರುವ ಕೈಗಾರಿಕೆಗಳಿಗೆ ಅವಕಾಶವಿರುತ್ತದೆ. ನೌಕರರು ಐಡಿ ಕಾರ್ಡ್ ತೋರಿಸಿ ಪ್ರಯಾಣಿಸಬೇಕು.

ಒಟ್ಟಾರೆ ರಾತ್ರಿ ಕರ್ಫ್ಯೂ ಹಾಗೂ ವಿಕೆಂಡ್ ಕರ್ಫ್ಯೂ ಸಂದರ್ಭದಲ್ಲಿ ಅನುಮತಿ ನೀಡಲಾದ ಚಟುವಟಿಕೆ ಹೊರತು ಪಡಿಸಿ ಜನರ ಹಾಗೂ ವಾಹನಗಳ ಅನಗತ್ಯ ಓಡಾಟಕ್ಕೆ ನಿರ್ಭಂಧಿಸಲಾಗಿದೆ.

ಅದರಂತೆ ಟೆಲಿಕಾಂ, ಇಂಟರ್ನೆಟ್ ಸಂಸ್ಥೆಗಳ ನೌಕರರು ಮತ್ತು ವಾಹನಗಳ ಸಂಚಾರಕ್ಕೆ ಯಾವುದೇ ನಿರ್ಬಂಧವಿಲ್ಲ. ಆದರೆ ಗುರುತಿನ ಚೀಟಿಯೊಂದಿಗೆ ಪ್ರಯಾಣಿಸಬೇಕು. ವೈದ್ಯಕೀಯ ತುರ್ತು ಸೇವೆಗಳು ಅಗತ್ಯ ಸೇವೆಗಳಾದ ಫಾರ್ಮಸಿಗಳ ಕಾರ್ಯಾಚರಣೆಗೆ ಯಾವುದೇ ನಿರ್ಬಂಧವಿರುವುದಿಲ್ಲ. ಎಲ್ಲಾ ತರಹದ ಸರಕುಗಳು ಮತ್ತು ಸರಕು ಸಾಗಾಟ ವಾಹನಗಳ ಸಂಚಾರಕ್ಕೆ ನಿರ್ಬಂಧ ಇರುವುದಿಲ್ಲ. ಸರಕುಗಳ ಹೋಂ ಡೆಲಿವರಿ, ಇ-ಕಾಮರ್ಸ್ ಚಟುವಟಿಕೆಗಳಿಗೆ ಸರಕಾರದ ಮಾರ್ಗಸೂಚಿ ಅನ್ವಯ ಅವಕಾಶ ಇರುತ್ತದೆ.

ರೈಲು, ವಿಮಾನ ಸೇವೆ ಎಂದಿನಂತೆ ಅವಕಾಶವಿದ್ದು ಟಿಕೆಟ್ ಅನ್ನು ಪಾಸ್ ರೀತಿಯಲ್ಲಿ ಬಳಸಲು ಸೂಚಿಸಲಾಗಿದೆ.

ಅದರಂತೆ ರಾತ್ರಿ ಕರ್ಫ್ಯೂ ಹಾಗೂ ವಿಕೆಂಡ್ ಕರ್ಫ್ಯೂ ವೇಳೆ ಸರಕಾರದ ಮಾರ್ಗಸೂಚಿ ಅನ್ವಯ ಅನುಮತಿ ನೀಡಲಾದ ಚಟುವಟಿಕೆ ಹೊರತು ಪಡಿಸಿ ಅನಗತ್ಯ ವಾಹನಗಳು ಹಾಗೂ ವ್ಯಕ್ತಿಗಳು ಓಡಾಟ ನಡೆಸದಿರಲು ತಿಳಿಸಿರುವ ಅವರು ಸಾರ್ವಜನಿಕರು ಮಾಸ್ಕ ಧರಿಸಿ ಸಾಮಾಜಿಕ ಅಂತರದೊಂದಿಗೆ ಸರಕಾರದ ಮಾರ್ಗಸೂಚಿಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಪಿ. ಸುನೀಲ‌ಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

ಹೊಸ ಪೋಸ್ಟ್‌