ಇಬ್ರಾಹಿಂಪೂರ ರೇಲ್ವೆ ಮೇಲ್ಸೇತುವೆ ಕಾಮಗಾರಿ ಬೇಗ ಮುಗಿಸಲು ಸಂಸದ ರಮೇಶ ಜಿಗಜಿಣಗಿ ಸೂಚನೆ

ವಿಜಯಪುರ: ಬಹುದಿನಗಳಿಂದ ಕುಂಟುತ್ತ ಸಾಗಿರುವ ವಿಜಯಪುರ ನಗರದ ಇಬ್ರಾಹಿಂಪುರ ರೇಲ್ವೆ ಮೇಲ್ಸೇತುವೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಸೂಚನೆ ನೀಡಿದ್ದಾರೆ.

ಇಬ್ರಾಹಿಂಪುರ ರೇಲ್ವೆ ಗೇಟ್ ಹತ್ತಿರದ ನಿರ್ಮಾಣ ಹಂತದಲ್ಲಿರುವ ರೇಲ್ವೆ ಮೇಲ್ಸೇತುವೆ ಕಾಮಗಾರಿಯನ್ನು ವೀಕ್ಷಿಸಿದ ಅವರು, ಪರಿಶೀಲನೆ ನಡೆಸಿದರು.

ಈ ಹಿಂದೆಯೇ ಪೂರ್ಣವಾಗಬೇಕಿದ್ದ ಈ ಕಾಮಗಾರಿ ಕುಂಟುತ್ತ ಸಾಗಿದೆ. ಇದರಿಂದಾಗಿ ಈ ಭಾಗದ ಜನರ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಈ ಕುರಿತು ಸಾರ್ವಜಬಿಕರ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಅವರು, ಈ ಸಂದರ್ಭದಲ್ಲಿ ಸಾರ್ವಜನಿಕ ಸಂಚಾರಕ್ಕಾಗಿ ಸಮಸ್ಯೆ ಉಂಟಾಗುತ್ತಿರುವುದನ್ನು ಖುದ್ದಾಗಿ ಗಮನಿಸಿದರು‌.

ಅಲ್ಲದೇ, ಈ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿನೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವರ ಅಪ್ಪು ಪಟ್ಟಣಶೆಟ್ಟಿ, ಬಿಜೆಪಿ ಮುಖಂಡರಾದ ಪ್ರಕಾಶ ಅಕ್ಕಲಕೋಟಿ, ಸಂಪತ ಕುವಳ್ಳಿ, ಸಿದ್ದು ಮಲ್ಲಿಕಾರ್ಜುನಮಠ ಮತ್ತು ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌