ಮಾಧ್ಯಮ ಮಿತ್ರರೇ ನಾನು ಶ್ರೀ ಅರುಣ್ ಸಿಂಗ್ ಅವರ ಭೇಟಿಗೆ ಅವಕಾಶ ಕೇಳಿಲ್ಲ ಸುಳ್ಳು ಸುದ್ದಿ ಬಿತ್ತರಿಸಬೇಡಿ- ಫೇಸ್ ಬುಕ್ ನಲ್ಲಿ ಯತ್ನಾಳ ಸ್ಪಷ್ಟನೆ

ವಿಜಯಪುರ: ಮಾಧ್ಯಮ ಮಿತ್ರರೇ ನಾನು ಶ್ರೀ ಅರುಣ್ ಸಿಂಗ್ ಅವರ ಭೇಟಿಗೆ ಅವಕಾಶ ಕೇಳಿಲ್ಲ ಸುಳ್ಳು ಸುದ್ದಿ ಬಿತ್ತರಿಸಬೇಡಿ. ಹೀಗಂತ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಮ್ಮ ಫೇಸ್ ಬುಕ್ ಅಕೌಂಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ. https://m.facebook.com/story.php?story_fbid=2427192324091872&id=100004033850943 ರಾಜ್ಯ ಬಿಜೆಪಿಯಲ್ಲಿನ ಘಟನಾವಳಿಗಳ ಅಧ್ಯಯನ ಮತ್ತು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ವಿರುದ್ಧ ಸ್ವಪಕ್ಷೀಯರಿಂದಲೇ ಅಸಮಾಧಾನ ವ್ಯಕ್ತವಾದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ ಸಿಂಗ್ ಬೆಂಗಳೂರಿಗೆ ಆಗಮಿಸಿದ್ದಾರೆ. ಈ ಸಂದರ್ಭದಲ್ಲಿ ಯಡಿಯೂರಪ್ಪ […]

ಕೊರೊನಾ 3ನೇ ಅಲೆಯಿಂದ ತಮ್ಮ ಮಕ್ಕಳನ್ನು ರಕ್ಷಿಸಲು ಪಿಲೇಕಮ್ಮನ ಮೊರೆ ಹೋದ ಮಹಿಳೆಯರು

ವಿಜಯಪುರ: ಕೊರೊನಾ ಎರಡನೇ ಅಲೆಯಿಂದ ಜನ ಈಗಾಗಲೇ ಸಂಕಷ್ಟದಲ್ಲಿದ್ದು, ಮೂರನೇ ಅಲೆಯ ಬಗ್ಗೆಯೂ ಆತಂಕದಲ್ಲಿದ್ದಾರೆ. ಅದರಲ್ಲೂ ಕೊರೊನಾ 3ನೇ ಅಲೆ ಮಕ್ಕಳನ್ನು ಕಾಡಲಿದೆ ಎಂಬ ಮಾತುಗಳು ಕೇಳಿ ಬರುತ್ತಿರುವುದು ಪೋಷಕರು ಅದರಲ್ಲೂ ತಾಯಂದಿರು ಮತ್ತು ಮಹಿಳೆಯರನ್ನು ಹೆಚ್ಚು ಚಿಂತಾಕ್ರಾಂತರನ್ನಾಗಿ ಮಾಡಿದೆ. ಕೊರೊನಾ ಎರಡನೇ ಅಲೆಯ ಪ್ರಭಾವ ಕಡಿಮೆಯಾಗುತ್ತಿದ್ದರೂ ಸಂಭವನೀಯ ಮೂರನೇ ಅಲೆಯ ಭೀತಿ ಜನರನ್ನು ಕಾಡುತ್ತಿರುವುದರಿಂದ 3ನೇ ಅಲೆ ಪ್ರಭಾವ ಮಕ್ಕಳ ಮೇಲೆ. ಬೀರಬಾರದು ಎಂಬ ಸದುದ್ದೇಶದಿಂದ ಗ್ರಾಮಸ್ಥರು ಪಿಲೇಕಮ್ಮ ದೇವಿಯ ಮೊರೆ ಹೋಗಿದ್ದಾರೆ. ವಿಜಯಪುರ ಜಿಲ್ಲೆಯ […]