ವಿಜಯಪುರ ಜಿಲ್ಲೆಯಲ್ಲೂ ಅನಲಾಕ್- ಫಲ ನೀಡಿದ ಜಿಲ್ಲಾಧಿಕಾರಿ ಪ್ರಯತ್ನ, ಸಚಿವರ ಸ್ಪಂದನೆ

ವಿಜಯಪುರ: ವಿಜಯಪುರ ಜಿಲ್ಲೆಯನ್ನು ಅನಲಾಕ್ ಪಟ್ಟಿಗೆ ಸೇರಿಸಲಾಗಿದೆ.

ಸರಕಾರ ಈ ಕುರಿತು ಆದೇಶ ಹೊರಡಿಸಿದ್ದು, ಈಗ ಹೊರಡಿಸಿದ್ದು ಹೊಸದಾಗಿ ಉಡುಪಿ, ಬೆಂಗಳೂರು, ಗ್ರಾಮಾಂತರ, ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ ಮತ್ತು ವಿಜಯಪುರ ಜಿಲ್ಲೆಗಳನ್ನು ಅನಲಾಕ್ ಜಿಲ್ಲೆಗಳ ಪಟ್ಟಿಗೆ ಸೇರಿಸಿದೆ.

ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಸರಕಾರ ಹೊರಡಿಸಿರುವ ಆದೇಶದ ಕುರಿತು ಮಾಹಿತಿ ನೀಡಿದ್ದಾರೆ.

ರವಿವಾರದಿಂದಲೇ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಈ ನಿಟ್ಟಿನಲ್ಲಿ ಪ್ರಯತ್ನ ನಡೆಸಿ ಡಿಸಿಎಂ ಗೋವಿಂದ ಕಾರಜೋಳ, ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಮಾಹಿತಿ ನೀಡಿ ಸೂಕ್ತ ದಾಖಲೆ ಒದಗಿಸಿದ್ದರು. ಅಲ್ಲದೇ, ಇಂದು ಆದೇಶ ಬರುವ ನಿರೀಕ್ಷೆಯಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು. ಜಿಲ್ಲಾಧಿಕಾರಿಗಳ ನಿರೀಕ್ಷೆ ಈಗ ನಿಜಬಾಗಿದೆ.

ಇದರಿಂದಾಗಿ ಲಾಕಡೌನ್ ಸಡಿಲಿಕೆಯಾಗಿದ್ದು, ಬೆ. 6 ರಿಂದ ಸಂ. 5ರ ವರೆಗೆ ಕೊರೊನಾ ಮಾರ್ಗಸೂಚಿ ಅನ್ವಯ ವ್ಯಾಪಾರ, ವಹಿವಾಟು ಆರಂಭವಾಗಲಿದೆ.

Leave a Reply

ಹೊಸ ಪೋಸ್ಟ್‌