ಚಿಕ್ಕಗಲಗಲಿ ಬ್ಯಾರೇಜಿಗೆ ಶಾಸಕ ಎಂ. ಬಿ. ಪಾಟೀಲರಿಂದ ಬಾಗೀನ ಅರ್ಪಣೆ- ಅಧಿಕಾರದಲ್ಲಿದ್ದಾಗ ಜನಪರ ಕೆಲಸ ಮಾಡಬೇಕು ಎಂದ ಮಾಜಿ ಸಚಿವ

ವಿಜಯಪುರ: ಜಲಸಂಪನ್ಮೂಲ ಇಲಾಖೆ ಮಾಜಿ ಸಚಿವ ಮತ್ತು ವಿಜಯಪುರ ಜಿಲ್ಲೆಯ ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ ಚಿಕ್ಕಗಲಗಲಿ ಬ್ಯಾರೇಜಿಗೆ ಗಂಗಾಪೂಜೆ ಸಲ್ಲಿಸಿ ಬಾಗೀನ ಅರ್ಪಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಕೃಷ್ಣಾ ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸ್ವಕ್ಷೇತ್ರ ಬಬಲೇಶ್ವರ ತಾಲೂಕಿನ ಚಿಕ್ಕಗಲಗಲಿಯಲ್ಲಿ ಕೃಷ್ಣಾ ನದಿಗೆ ನಿರ್ಮಿಸಲಾಗಿರುವ ರೂ. 54 ಕೋ. ವೆಚ್ಚದ ನೂತನ ಬ್ರಿಡ್ಜ್-ಕಂ-ಬಾಂದಾರ ತುಂಬಿ ಹರಿಯುತ್ತಿದೆ. ಈ ಬ್ಯಾರೇಜಿಗೆ ಎಂ. ಬಿ. ಪವಾಟೀಲ ಗಂಗಾಪೂಜೆ ನೆರವೇರಿಸಿ, ಬಾಗೀನ […]

ಭೀಮಾ ತೀರದಲ್ಲಿ ಇಂಡಿ ಉಪವಿಭಾಗಾಧಿಕಾರಿ ರಾಹುಲ ಶಿಂಧೆ ನೇತೃತ್ವದಲ್ಲಿ ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ವಿಜಯಪುರ: ಸಂಭವನೀಯ ಪ್ರವಾಹ ಪರಿಸ್ಥಿತಿ ಎದುರಿಸುವ ಕುರಿತು ವಿಜಯಪುರ ಜಿಲ್ಲೆಯ ಭೀಮಾ ತೀರದಲ್ಲಿ ಅಣಕು ಪ್ರದರ್ಶನ ನಡೆಯಿತು. ಆಲಮೇಲ ತಾಲೂಕಿನ ದೇವಣಗಾಂವ ಗ್ರಾಮದ ಬಳಿ ಭೀಮಾ ನದಿಯಲ್ಲಿ ಇಂಡಿ ಉಪವಿಭಾಗಾಧಿಕಾರಿ ರಾಹುಲ ಶಿಂಧೆ ಉಸ್ತುವಾರಿಯಲ್ಲಿ ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ ನಡೆಯಿತು. ದೇವಣಗಾಂವ ಗ್ರಾ. ಪಂ. ಮಟ್ಟದ ವಿಪತ್ತು ನಿರ್ವಹಣಾ ಯೋಜನಾ ಸಮಿತಿಗೆ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಅರಿವು ನೀಡುವ ಜೊತೆಗೆ ತಾವರಖೇಡ ಗ್ರಾಮದಲ್ಲಿ ದೋಣಿ ಸಹಾಯದಿಂದ ರಕ್ಷಣಾ ಕಾರ್ಯಾಚರಣೆಯ ಬಗ್ಗೆ ಅಣಕು ಪ್ರದರ್ಶನ ನಡೆಸಲಾಯಿತು. […]

ಕರುಳ ಕುಡಿಯ ಕಳೆಬರದ ಎದುರು ಐದಾರು ಗಂಟೆ ನಿಂತು ಅಶ್ವಧಾರೆ ಸುರಿಸಿದ ತಾಯಿ

ವಿಜಯಪುರ: ಕೊರೊನಾ ಸಂಕಷ್ಟ ಸಮಯಮದಲ್ಲಿ ತಮ್ಮವರನ್ನು ಕಳೆದುಕೊಂಡರೂ ಅಂತ್ಯಕ್ರಿಯೆ, ಅಸ್ತಿವಿರ್ಜನೆಗೂ ಮುಂದಾಗದ ಹಲವಾರು ಉದಾಹರಣೆಗಳು ನಮ್ಮ ಕಣ್ಣಮುಂದೆ ಇರುವಾಗ ಮೂಕ ಪ್ರಾಣಿಯ ಈ ಘಟನೆ ಎಂಥವರ ಕಣ್ಣಂಚಿನಲ್ಲೂ ನೀರು ತರಿಸುವಂತಿದೆ. ಇದು ಮಾೃತಹೃದಯಕ್ಕೆ ಪ್ರತ್ಯಕ್ಷ ಸಾಕ್ಷಿ. ತಾಯಿ ಕರಳು ಎಂಥದ್ದೂ ಎಂಬುದಕ್ಕೆ ತಾಜಾ ಉದಾಹರಣೆ. ಕರುಳ ಕುಡಿಯನ್ನು ಕಳೆದುಕೊಂಡ ತಾಯಿ ಕುದುರೆಯೊಂದು ಅದರ ಕಳೆಬರದ ಎದುರು ಐದಾರು ಗಂಟೆ ಸತತವಾಗಿ ನಿಂತು ರೋಧಿಸಿದ ಹೃದಯ ವಿದ್ರಾವಕ ಘಟನೆಯಿದು. ಈ ಘಟನೆ ನಡೆದಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ […]

ಅಭಿವೃದ್ಧಿ ಕಾಮಗಾರಿಗಳ ಚಾಲನೆ ಜೊತೆಗೆ ಕೊರೊನಾ ಮಾರ್ಗಸೂಚಿ ಪಾಲನೆ ಬಗ್ಗೆ ಜನಜಾಗೃತಿ ಮೂಡಿಸುತ್ತಿರುವ ಜನಪರ ಶಾಸಕ ಎಂ. ಬಿ. ಪಾಟೀಲ

ವಿಜಯಪುರ: ಕೊರೊನಾ ಸೋಂಕು ಕಡಿಮೆಯಾಗುತ್ತಿದ್ದಂತೆ ವಿಜಯಪುರ ಜಿಲ್ಲೆಯ ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡುವ ಮೂಲಕ ಮತ್ತೆ ಜನಪರ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೆ, ಈ ಕಾರ್ಯಕ್ರಮಗಳು ಕೇವಲ ಸಮಾರಂಭಗಳಿಗೆ ಸೀಮಿತವಾಗದೇ ತಮ್ಮ ಮತಕ್ಷೇತ್ರದ ಜನರಲ್ಲಿ ಕೊರೊನಾ ಬಗ್ಗೆ ಜನಜಾಗೃತಿ ಮೂಡಿಸುವ ಕಡೆಗೂ ಶಾಸಕರು ಗಮನ ಹರಿಸಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ಶಾಸಕರ ಸಲಹೆ ದೇಶದ ನೂರು ಕೋಟಿ ಜನರು ಹಾಗೂ ನಮ್ಮ ರಾಜ್ಯದಲ್ಲಿ ಐದು ಕೋಟಿ ಜನರು ಲಸಿಕೆ ಹಾಕಿಸಿಕೊಂಡರೆ […]