ಯಡಿಯೂರಪ್ಪ ಟಾಲ್ ಲೀಡರ್- ಆದರೆ, ಲಿಂಗಾಯಿತರಲ್ಲಿ ನಾನು ಸೇರಿದಂತೆ ಪರ್ಯಾಯ ನಾಯಕರಿದ್ದೇವೆ- ಎಂ. ಬಿ. ಪಾಟೀಲ

ಮೈಸೂರು: ಯಡಿಯೂರಪ್ಪ ದೊಡ್ಡ ನಾಯಕರು. ಲಿಂಗಾಯಿತರಲ್ಲಿ ದೊಡ್ಡ ನಾಯಕರಾಗಿ ಬೆಳೆದಿದ್ದಾರೆ. ಆದರೆ, ಲಿಂಗಾಯಿತರಲ್ಲಿ ಪರ್ಯಾಯ ನಾಯಕರಿಲ್ಲ ಎನ್ನುವುದು ಸುಳ್ಳು ಎಂದು ಮಾಜಿ ಸಚಿವ ಮತ್ತು ವಿಜಯಪುರ ಜಿಲ್ಲೆಯ ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ ಹೇಳಿದ್ದಾರೆ. ಮೈಸೂರಿನಲ್ಲಿ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳಿಂದ ಆಶೀರ್ವಾದ ಪಡೆದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಅವರು ಮಾತನಾಡಿದರು. ಸೆಕೆಂಡ್ ಲೈನ್ ನಲ್ಲಿ ಬಹಳಷ್ಟು ಜನ ಲಿಂಗಾಯಿತ ನಾಯಕರಿದ್ದಾರೆ. ಕಾಂಗ್ರೆಸ್ಸಿನಲ್ಲಿ ನಾನಿದ್ದೇನೆ. ಶರಣ ಪ್ರಕಾಶ ಪಾಟೀಲ, ಈಶ್ವರ ಖಂಡ್ರೆ […]

ಮಹಾರಾಷ್ಟ್ರ ಮತ್ತೀತರ ನೆರೆಯ ರಾಜ್ಯಗಳಿಗೆ ಸಾರ್ವಜನಿಕರು ತೆರಳಲು, ಮರಳಲು ಸರಕಾರ ವಿಧಿಸಿರುವ ಷರತ್ತುಗಳೇನು ಗೊತ್ತಾ?

ವಿಜಯಪುರ: ಸಂಭವನೀಯ ಕೊರೊನಾ 3ನೇ ಅಲೆಯನ್ನು ತಡೆಗಟ್ಟಲು ರಾಜ್ಯ ಸರಕಾರ ಬಿಗೀ ನಿಲುವು ತೆಗೆದುಕೊಂಡಿದ್ದು, ನೆರೆಯ ರಾಜ್ಯಗಳಿಗೆ ತೆರಳಲು ಮತ್ತು ಅಲ್ಲಿಂದ ಬರುವವರಿಗಾಗಿ ಹಲವಾರು ಷರತ್ತುಗಳನ್ನು ವಿಧಿಸಿದೆ. ಈ ಕುರಿತು ಮಾಹಿತಿ ನೀಡಿರುವ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ, ವಿಜಯಪುರ ಜಿಲ್ಲೆಯ ಮಹಾರಾಷ್ಟ್ರ್ದ ಗಡಿ ತಾಲೂಕಿನ ನಾನಾ ಗ್ರಾಮಗಳಲ್ಲಿ ಎಲ್ಲ ಅರ್ಹ ಜನರಿಗೆ ಕೊರೊನಾ ಲಸಿಕೆ ಹಾಕಿಸಿಕೊಳ್ಳಲು ಸೂಚನೆ ನೀಡಿದ್ದಾರೆ. ವಿಜಯಪುರ ಜಿಲ್ಲೆಯ ಗಡಿ ಭಾಗಗಳಾದ ಚಡಚಣ ತಾಲೂಕಿನ ದೂಳಖೇಡ, ಶಿರಾಡೋಣ ಮತ್ತು ಇತರೆ ಚೆಕ್ […]

ಕಾಂಗ್ರೆಸ್ಸಿನಲ್ಲಿ ಹೈಕಮಾಂಡ ನಿರ್ಧಾರವೇ ಅಂತಿಮ- ಎಸ್. ಆರ್. ಪಾಟೀಲ

ವಿಜಯಪುರ: ಸಿಎಂ ಅಭ್ಯರ್ಥಿಯ ಬಗ್ಗೆ ಯಾರೂ ಮಾತನಾಡದಂತೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸ್ಪಷ್ಟ ಸೂಚನೆ ನೀಡಿದ್ದಾರೆ ವಿಧಾನ ಪರಿಷತ್ ಪ್ರತಿಪಕ್ಷದ ‌ನಾಯಕ ಎಸ್. ಆರ್. ಪಾಟೀಲ ತಿಳಿಸಿದ್ದಾರೆ‌ ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ಬಳಿಕ ಶಾಸಕಾಂಗ ಸಭೆ ನಡೆಸಿ ನಾಯಕನನ್ನು ಆಯ್ಕೆ ಮಾಡಲಾಗುತ್ತದೆ. ಯಾರೋ ಹೇಳಿದರು ಎಂದು ಮುಖ್ಯಮಂತ್ರಿ ಮಾಡಲು ಆಗುವುದಿಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ಸಿನಲ್ಲಿ ಎದ್ದಿರುವ ಮುಂದಿನ ಸಿಎಂ ವಿಚಾರದ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಶಾಸಕಾಂಗ ಸಭೆಯಲ್ಲಿ ಹೈಕಮಾಂಡ್ ಪ್ರತಿನಿಧಿ ಇರುತ್ತಾರೆ. […]