ಯತ್ನಾಳ ಜೊತೆ ಸದಾ ಕಾಲ ನಾನಿರುತ್ತೇನೆ ಎಂದ ಸಚಿವ ಸಿ. ಪಿ. ಯೋಗೇಶ್ವರ

ವಿಜಯಪುರ: ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಜೊತೆಗೆ ನಾನು‌ ಸದಾ ಕಾಲ‌ ಇರುತ್ತೇನೆ ಎಂದು ಸೈನಿಕ ಎಂದೇ ಖ್ಯಾತಿಯಾಗಿರುವ ಸಚಿವ ಸಿ. ಪಿ. ಯೋಗೇಶ್ವರ ಭರವಸೆ ನೀಡಿದ್ದಾರೆ.

ವಿಜಯಪುರದಲ್ಲಿ ತ್ರಿ ಸ್ಟಾರ್ ಹೋಟೇಲ್ ಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಯತ್ನಾಳ ಅವರ ದ್ವನಿಗೆ ದ್ವನಿಯಾಗಿ ನಾನು ಸದಾ ಕಾಲ ನಿಲ್ಲುವೆ ಎಂದು ಹೇಳುವ ಮೂಲಕ ಬಿಜೆಪಿಯಲ್ಲಿ ರೆಬೆಲ್ ನಾಯಕ ಎಂದೇ ಹೆಸರಾಗಿರುವ ಶಾಸಕ ಯತ್ನಾಳ ಬೆಂಬಲಕ್ಕೆ ನಿಂತಿದ್ದಾರೆ.

ಮುಂದಿನ ದಿನಗಳಲ್ಲಿ ಈ ಭಾಗದ ಅಭಿವೃದ್ಧಿಗಾಗಿ ಯತ್ನಾಳ ಅವರಿಗೆ ಒಳ್ಳೆಯ ಅವಕಾಶಗಳ ಬರಲಿ. ಅವರ ಜೊತೆಗೆ ಸ್ನೇಹಿತನಾಗಿ ಮಾನಸಿಕ ಸ್ಥೈರ್ಯ ತುಂಬುವದರ ಜೊತೆಗೆ ನಾನು ಇರುತ್ತೇನೆ. ಮುಂದಿನ ದಿನಗಳಲ್ಲಿ ಪಕ್ಷ ಅವರಿಗೆ ಉತ್ತಮ ಅವಕಾಶ ನೀಡುವ ಆಶಾಭಾವನೆ ಇದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಕಲಬುರಗಿಯಲ್ಲಿ ಯಾವ ನಾಯಕರೂ ಭೇಟಿಯಾಗದ ವಿಚಾರ

ಕಲಬುರಗಿಯಲ್ಲಿ ಸಚಿವರು ಆಗಮಿಸಿದಾಗ ಏರಪೋರ್ಟ್ ಗೆ ಯಾವೊಬ್ಬ ಬಿಜೆಪಿ ನಾಯಕರೂ ಬರದಿರುವ ಮತ್ತು ಸಚಿವರ ಕಾರ್ಯಕ್ರಮದಲ್ಲಿ ಯಾವ ನಾಯಕರೂ ಪಾಲ್ಗೋಳ್ಳದ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಇದರಲ್ಲಿ ರಾಜಕೀಯ ಏನು ಇಲ್ಲ. ಕೊರೊನಾ ಕಾರಣದಿಂದ ಕಲಬುರಗಿಯಲ್ಲಿ ಯಾರಿಗೂ ಮಾಹಿತಿ ಕೊಟ್ಟಿರಲಿಲ್ಲ. ಕಾರ್ಯಕರ್ತರಿಗೆ ಮುಖಂಡರಿಗೆ ಮಾಹಿತಿ ನೀಡಿರಲಿಲ್ಲ. ಹೀಗಾಗಿ ಯಾರೂ ಬರಲಿಲ್ಲ. ಇದರಲ್ಲಿ ರಾಜಕೀಯ ವಿಶೇಷ ಏನು ಇಲ್ಲ. ಸಿಎಂ ವಿರುದ್ಧ ರೆಬಲ್ ಆದೆ ಎನ್ನುವ ಕಾರಣಕ್ಕೆ ಈ ರೀತಿ ಏನಿಲ್ಲ ಎಂದು ಸಚಿವ ಸಿ. ಪಿ. ಯೋಗೇಶ್ವರ ತಿಳಿಸಿದರು.

ಈ ಸಂದರ್ಭದಲ್ಲಿ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸೇರಿದಂತೆ ನಾನಾ ಮುಖಂಡರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌