ಶಾಸಕ ಎಂ. ಬಿ. ಪಾಟೀಲ ಅವರಿಂದ ಜು. 1 ರಿಂದ ಮೂರು ದಿನ ವಿಜಯಪುರದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ

ವಿಜಯಪುರ: ಮಾಜಿ ಸಚಿವ ಮತ್ತು ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ ಅವರು ಮೂರು ದಿನ ವಿಜಯಪುರದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಜುಲೈ 1, 2 ಮತ್ತು 3 ರಂದು ವಿಜಯಪುರದಲ್ಲಿ ವಾಸ್ತವ್ಯ ಇರಲಿರುವ ಮಾಜಿ ಸಚಿವರು ಈ ಮೂರು ದಿನ ಬೆ.11 ರಿಂದ ಮ. 2ರ ವರೆಗೆ ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ. ವಿಜಯಪುರ ನಗರದ ಬಿ ಎಲ್ ಡಿ ಇ ಸಂಸ್ಥೆ ಆವರಣದಲ್ಲಿರುವ ಶಾಸಕರ ಕಚೇರಿಯಲ್ಲಿ ಎಂ. ಬಿ. ಪಾಟೀಲ ಅವರು ಸಾವರ್ಜನಿಕರ ಕುಂದು ಕೊರತೆಗಳನ್ನು ಆಲಿಸಲಿದ್ದಾರೆ.

ಸಾರ್ವಜನಿಕರು ಕೊರೊನಾ ಮಾರ್ಗಸೂಚಿಯನ್ನು ಪಾಲಿಸುವ ಮೂಲಕ ತಮ್ಮ ಅಹವಾಲು ಸಲ್ಲಿಸಬಹುದಾಗಿದೆ ಎಂದು ಶಾಸಕರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿಲಾಗಿದೆ.

Leave a Reply

ಹೊಸ ಪೋಸ್ಟ್‌