ನಾಟಕ ಅಕಾಡೆಮಿ, ರಂಗಾಯಣಗಳ ನೇತೃತ್ವದ ರಂಗಕರ್ಮಿಗಳ ನಿಯೋಗದಿಂದ ಎಂ ಎಲ್ ಸಿ ಅರುಣ ಶಹಾಪುರ ನೇತೃತ್ವದಲ್ಲಿ ಸಚಿವ ಸುರೇಶ ಕುಮಾರ ಭೇಟಿ

ಬೆಂಗಳೂರು: ನಾಟಕ ಅಕಾಡೆಮಿ ಹಾಗೂ ರಂಗಾಯಣಗಳ ನೇತೃತ್ವದ ರಂಗಕರ್ಮಿಗಳ ನಿಯೋಗ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಎಸ್ ಸುರೇಶಕುಮಾರ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಭೇಟಿ ಮಾಡಿತು.

ವಿಧಾನ ಪರಿಷತ ಬಿಜೆಪಿ ಸದಸ್ಯ ಅರುಣ ಶಹಾಪುರ ನೇತೃತ್ವದಲ್ಲಿ ಸಚಿವರನ್ನು ಭೇಟಿ ಮಾಡಿದ ನಿಯೋಗ, ರಂಗ ಶಿಕ್ಷಕರ ನೇಮಕಾತಿ ಕುರಿತಂತೆ ಚರ್ಚಿಸಿ ಮನವಿ ಸಲ್ಲಿಸಿತು.

ಈ ಸಂದರ್ಭದಲ್ಲಿ ನಾಟಕ ಅಕಾಡೆಮಿ ಅದ್ಯಕ್ಷ ಆರ್. ಭೀಮಸೇನ, ನಾಟಕ ಅಕಾಡೆಮಿ ಸದಸ್ಯರಾದ ಪ್ರಭುದೇವ ಕಪ್ಪಗಲ್ಲು, ರಂಗ ಕರ್ಮಿಗಳಾದ ಡಾ. ಬಿ. ವಿ. ರಾಜರಾಮ, ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ, ಕಲಬುರಗಿ ರಂಗಾಯಣ ನಿರ್ದೇಶಕ ಪ್ರಭಾಕರ ಜೋಷಿ, ಶಿವಮೊಗ್ಗ ರಂಗಾಯಣ ನಿರ್ದೇಶಕ ಸಂದೇಶ ಜವಳಿ ಸೇರಿದಂತೆ ಇತರ ರಂಗಕರ್ಮಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌