ಜಿ ಎಸ್ ಟಿ ಯಶಸ್ಸಿಗೆ ತೆರಿಗೆ ಸಲಹೆಗಾರರ ಕೊಡುಗೆ ಅಪಾರ- ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಸರಕು ಮತ್ತು ಸೇವಾ ತೆರಿಗೆ ( GST )ವ್ಯವಸ್ಥೆ ದೇಶದಲ್ಲಿ ಯಶಸ್ವಿಯಾಗಲು ತೆರಿಗೆ ಸಲಹೆಗಾರರ ಕೊಡುಗೆ ಅಪಾರವಾಗಿದೆ ಎಂದು ಜಿ ಎಸ್ ಟಿ ಮಂಡಳಿಯ ಕರ್ನಾಟಕದ ಪ್ರತಿನಿಧಿ, ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕರ್ನಾಟಕ ರಾಜ್ಯ ತೆರಿಗೆ ಸಲಹೆಗಾರರ ಸಂಘ ನಾಲ್ಕನೇ ವರ್ಷದ ಜಿ ಎಸ್ ಟಿ ದಿನದ ಅಂಗವಾಗಿ ಆಯೋಜಿಸಿದ್ದ ಸಮಾರಂಭವನ್ನು ವರ್ಚುವಲ್ ಕಾರ್ಯಕ್ರಮದ ಮೂಲಕ ಉದ್ಗಾಟಿಸಿ ಅವರು ಮಾತನಾಡಿದರು.

ಜಿ ಎಸ್ ಟಿ ನಾಲ್ಕನೇ ವರ್ಷದ ಕಾರ್ಯಕ್ರಮದಲ್ಲಿ ವರ್ಚ್ಯೂವಲ್ ಮೂಲಕ ಪಾಲ್ಗೋಂಡ ಸಚಿವ ಬಸವರಾಜ ಬೊಮ್ಮಾಯಿ

ದೇಶದಲ್ಲಿ ಸರಕು ಮತ್ತು ಸೇವಾ ತೆರಿಗೆ ವ್ಯವಸ್ಥೆ ಬಗ್ಗೆ 10 ವರ್ಷಗಳ ಕಾಲ ಚರ್ಚೆಯಾಗಿದೆ. ಇಷ್ಟು ವರ್ಷಗಳ ಸುದೀರ್ಘ ಚರ್ಚೆಯ ನಂತರ ಜಿ ಎಸ್ ಟಿ ಜಾರಿಯಾಗಿದೆ. ಒಂದು ರಾಷ್ಟ್ರ ಒಂದು ತೆರಿಗೆ ಪರಿಕಲ್ಪನೆಯ ಜತೆ ಈ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಹಲವಾರು ವೈರುಧ್ಯ ಮತ್ತು ವೈವಿಧ್ಯತೆ ರಾಜ್ಯಗಳನ್ನು ಒಗ್ಗೂಡಿಸಿಕೊಂಡು ಹೋಗುವುದು ಬಹುದೊಡ್ಡ ಕೆಲಸ. ಈ ದೊಡ್ಡ ಕೆಲಸದ ಹಿಂದಿರುವ ಎಂಜಿನ್ ಎಂದರೆ ಪ್ರಧಾನಿ ನರೇಂದ್ರ ಮೋದಿ ಎಂದು ಅವರು ಬಣ್ಣಿಸಿದರು.

ಜಿ ಎಸ್ ಟಿ ನಾಲ್ಕನೇ ವರ್ಷದ ಕಾರ್ಯಕ್ರಮದಲ್ಲಿ ವರ್ಚ್ಯೂವಲ್ ಮೂಲಕ ಪಾಲ್ಗೋಂಡ ಸಚಿವ ಬಸವರಾಜ ಬೊಮ್ಮಾಯಿ

ತೆರಿಗೆ ಸಲಹೆಗಾರರು ದೇಶದಲ್ಲಿ ಜಿ ಎಸ್ ಟಿ ಜಾರಿಯಾದಾಗ ಹಳೆಯ ಪದ್ಧತಿಯಿಂದ ಹೊಸ ಪದ್ಧತಿಗೆ ತಮ್ಮನ್ನು ತಾವು ಪರಿವರ್ತನೆ ಮಾಡಿಕೊಂಡಿದ್ದಾರೆ. ಅವರು ಹೊಸ ತೆರಿಗೆ ಪದ್ಧತಿಯನ್ನು ಅನುಷ್ಠಾನಕ್ಕೆ ತಂದಿದ್ದಾರೆ. ಜನರಲ್ಲಿ ಗೊಂದಲ ಸೃಷ್ಟಿಯಾಗದಂತೆ ಮುತುವರ್ಜಿ ವಹಿಸಿದ್ದಾರೆ. ಈ ಕಾರಣದಿಂದಾಗಿ ದೇಶದಲ್ಲಿ ಇಂದು ಜಿ ಎಸ್ ಟಿ ತೆರಿಗೆ ವ್ಯವಸ್ಥೆ ನಾಲ್ಕು ವರ್ಷಗಳನ್ನು ಪೂರೈಸಿದೆ. ನಮ್ಮ ಮುಂದೆ ಮುಂದಿನ 40 ವರ್ಷಗಳಲ್ಲಿ ತೆರಿಗೆ ವ್ಯವಸ್ಥೆಯಲ್ಲಿ ಇನ್ನಷ್ಟು ಸರಳಿಕರಣ ಮಾಡಬೇಕಾದ ಅಗತ್ಯವಿಜೆ. ಒಟ್ಟಾರೆ ದೇಶ ಕಟ್ಟುವ ಕೆಲಸದಲ್ಲಿ ಹಾಗೂ ದೇಶದ ಅಭಿವೃದ್ಧಿಯಲ್ಲಿ ತೆರಿಗೆ ಸಲಹೆಗಾರರು ನಿರ್ವಹಿಸುವ ಪಾತ್ರ ಬಹುಮುಖ್ಯವಾಗಿದೆ ಎಂದು ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

Leave a Reply

ಹೊಸ ಪೋಸ್ಟ್‌