ಕಂದಾಯ ದಿನಾಚರಣೆ ಅಂಗವಾಗಿ ಬಸವ ನಾಡಿನಲ್ಲಿ ರಕ್ತದಾನ ಶಿಬಿರ

ವಿಜಯಪುರ: ಕಂದಾಯ ದಿನಾಚರಣೆ ಅಂಗವಾಗಿ ವಿಜಯಪುರದಲ್ಲಿ ಸಸಿ ನೆಡುವ ಮತ್ತು ರಕ್ತದಾನ ಶಿಬಿರ ಕಾರ್ಯಕ್ರಮ ನಡೆಯಿತು.

ವಿಜಯಪುರ ಜಿಲ್ಲಾಧಿಕಾರಿಗಳವರ ಕಚೇರಿಯ ಆವರಣದಲ್ಲಿ ಸಸಿ ನೆಡುವ ಮೂಲಕ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಸರಕಾರಿ ನೌಕರರ ಭವನದಲ್ಲಿ ರಕ್ತದಾನ ಶಿಬಿರವನ್ನು ಉದ್ಘಾಟಿಸಿದರು.

ಕಂದಾಯ ದಿನಾಚರಣೆ ಅಂಗವಾಗಿ ವಿಜಯಪುರದಲ್ಲಿ ರಕ್ತದಾನ ಶಿಬಿರ ನಡೆಯಿತು

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ರಮೇಶ ಕಳಸದ, ವಿಜಯಪುರ ಉಪವಿಭಾಗಾಧಿಕಾರಿ ಬಲರಾಮ ಲಮಾಣಿ, ತಹಸೀಲದಾರ ಸಿದ್ರಾಯ ಭೋಸಗಿ, ಕಂದಾಯ ಇಲಾಖೆ ನೌಕರರ ಸಂಘದ ಅಧ್ಯಕ್ಷ ಜಿ. ಎಸ್. ರಾಜಾಪುರ, ಶಿರಸ್ತೇದಾರರು, ಬಬಲೇಶ್ವರ ತಹಸೀಲ್ದಾರ ಮಲ್ಲಿಕಾರ್ಜುನ ಅರಕೇರಿ, ಅಧಿಕಾರಿಗಳಾದ ಜಿ. ಪಿ. ಡೋಬಳೆ, ಉಪ ತಹಸೀಲದಾರ ನಾಗಠಾಣ, ಗ್ರಾಮ ಲೆಕ್ಕಾಧಿಕಾರಿಗಳ ಸಂಘ ಅಧ್ಯಕ್ಷ ಬಡಿಗೇರ, ಕಂದಾಯ ಇಲಾಖೆಯ ಸಿಬ್ಬಂದಿ ಪ್ರತಿನಿಧಿಗಳು ಉಪಸ್ಥಿತರಿದ್ದರು

Leave a Reply

ಹೊಸ ಪೋಸ್ಟ್‌