ಕೊರೊನಾ ನಿಯಂತ್ರಣಕ್ಕಾಗಿ ಅರ್ಹ ಪಲಾನುಭವಿಗಳು ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಲು ಗ್ರಾಮೀಣಾಭಿವೃದ್ಧಿ ಇಲಾಖೆಯ ಇ- ಆಡಳಿತ ನಿರ್ದೆಶಕಿ ಶಿಲ್ಪಾ ನಾಗ ಕರೆ

ವಿಜಯಪುರ: ಕೊರೊನಾ ಬಡವ ಶ್ರೀಮಂತ, ಹಿರಿಯರೂ, ಕಿರಿಯರೂ ಎನ್ನದೆ ಒಂದೂವರೆ ವರ್ಷದಿಂದ ಕಾಡುತ್ತಿದೆ. ಇದನ್ನು ಸಮರ್ಥವಾಗಿ ಎದುರಿಸಲು ಕಡ್ಡಾಯವಾಗಿ ಪ್ರತಿಯೊಬ್ಬರು ಲಸಿಕೆ ಹಾಕಿ ಕೊಳ್ಳಬೇಕು ಎಂದು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯಿತಿ ರಾಜ ಇಲಾಖೆಯ ಇ- ಆಡಳಿತ ನಿರ್ದೆಶಕಿ ಶಿಲ್ಪಾ ನಾಗ ಕರೆ ನೀಡಿದ್ದಾರೆ. ವಿಜಯಪುರ ನಗರದ ಜಿಲ್ಲಾಸ್ಪತ್ರೆಯ ಆವರಣದ ಕ್ಷಯ ರೋಗ ನಿರ್ವಹಣೆ ತರಬೇತಿ ಸಭಾಂಗಣದಲ್ಲಿ ನಡೆದ ಎರಡು ದಿನಗಳ ಮೂರು ಜಿಲ್ಲೆಗಳ ಕೊವಿಡ್ ಲಸಿಕಾ ಆಂದೋಲನ ಹಾಗೂ ತರಬೇತಿ ಕಾರ್ಯಕ್ರಮವನ್ನು ವರ್ಚುವಲ್ ಸಮಾರಂಭದ ಮೂಲಕ […]

ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಆರ್ಥಿಕ ನೆರವಿಗೆ ಕೇಂದ್ರ ಹಣಕಾಸು ಸಚಿವೆ ಒಪ್ಪಿಗೆ- ಸಚಿವ ಬಸವರಾಜ ಬೊಮ್ಮಾಯಿ

ಬೆಂಗಳೂರು: ಕೇಂದ್ರ ಪುರಸ್ಕೃತ ಯೋಜನೆಗಳಿಗೆ ತನ್ನ ಪಾಲಿನ ಹಣ ಬಿಡುಗಡೆ ಮಾಡಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ ಒಪ್ಪಿಗೆ ಸೂಚಿಸಿದ್ದಾರೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಮತ್ತು ಜಿ ಎಸ್ ಟಿ ಮಂಡಳಿಯ ಕರ್ನಾಟಕ ಪ್ರತಿನಿಧಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಸಂದರ್ಭದಲ್ಲಿ ಕೇಂದ್ರ ಸಚಿವೆ ಈ ಭರವಸೆ ನೀಡಿದ್ದಾರೆಂದು ಬೊಮ್ಮಾಯಿ ತಿಳಿಸಿದ್ದಾರೆ. ರಾಜ್ಯದಲ್ಲಿನ ಆರ್ಥಿಕ […]

ಬಸವಾದಿ ಶರಣರು, ಅವರ ವಚನಗಳು, ಕೊಡುಗೆ ಬೆಳಕಿಗೆ ಬರಲು ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಕಾರಣ- ಎಂ. ಬಿ. ಪಾಟೀಲ

ವಿಜಯಪುರ: ಬಸವಾದಿ ಶರಣರು, ಅವರ ವಚನಗಳು ಮತ್ತು ಅವರ ಕೊಡುಗೆಗಳು ಜಗತ್ತಿಗೆ ತಿಳಿಯಲು ವಚನ ಪಿತಾಮಹ ಫ. ಗು. ಹಳಕಟ್ಟಿ ಅವರೇ ಕಾರಣ. ಒಂದು ವೇಳೆ ಫ. ಗು. ಹಳಕಟ್ಟಿ ಅವರು ಇರದಿದ್ದರೆ ಬಸವ ನಾಡಿನ ಶರಣ ಚರಿತ್ರೆ ಯಾರಿಗೂ ಗೊತ್ತಾಗುತ್ತಿರಲಿಲ್ಲ ಎಂದು ಮಾಜಿ ಸಚಿವ ಮತ್ತು ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ ಹೇಳಿದ್ದಾರೆ. ವಿಜಯಪುರದಲ್ಲಿ ಬಿ. ಎಲ್. ಡಿ. ಇ. ಸಂಸ್ಥೆಯ ಆವರಣದಲ್ಲಿರುವ ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಕೇಂದ್ರದಲ್ಲಿ […]