ಮೈಸೂರಿಗೆ ತೆರಳಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದ ಯತ್ನಾಳ

ಮೈಸೂರು: ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮೈಸೂರಿಗೆ ತೆರಳಿ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ. ಮೈಸೂರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಅವರು ನಾಡದೇವತೆ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದರು. ಮನುಕುಲಕ್ಕೆ ಮಾರಕವಾಗಿರುವ ಕೊರೊನಾ ಮಹಾಮಾರಿಯನ್ನು ತೊಲಗಿಸಿ, ನಾಡಿನ ಜನತೆಗೆ ನೆಮ್ಮದಿಯ ದಿನಗಳನ್ನು ಕರುಣಿಸಲೆಂದು ಜಗನ್ಮಾತೆ ಚಾಮುಂಡೇಶ್ವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ ಭೇಟಿ ಮಾಡಿದ ವಿಧಾನ ಪರಿಷತ ಸದಸ್ಯ ಸುನೀಲಗೌಡ ಪಾಟೀಲ

ಬೆಂಗಳೂರು: ವಿಜಯಪುರ-ಬಾಗಲಕೋಟೆ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ಸುನೀಲಗೌಡ ಪಾಟೀಲ ಅವರು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಸೇವಾದಳದ ವಿಜಯಪುರ ಜಿಲ್ಲಾಧ್ಯಕ್ಷ ಮತ್ತು ಅಖಿಲ ಕರ್ನಾಟಕ ಡಿ. ಕೆ. ಶಿವಕುಮಾರ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ,ಡಾ. ಗಂಗಾಧರ ಸಂಬಣ್ಣಿ ಉಪಸ್ಥಿತರಿದ್ದರು