ಜನವಿರೋಧಿ ಸರಕಾರ ಕಿತ್ತೆಸೆಯುವವರೆಗೆ ವಿಶ್ರಮಿಸದಿರಿ- ಸಂಗಮೇಶ ಬಬಲೇಶ್ವರ

ವಿಜಯಪುರ: ಜನವಿರೋಧಿ ಸರಕಾರ ಕಿತ್ತೊಗೆಯುವವರೆಗೂ ವಿಶ್ರಮಿಸದಿರಿ ಎಂದು ಕೆಪಿಸಿಸಿ ಕಾರ್ಯದರ್ಶಿ ಸಂಗಮೇಶ ಬಬಲೇಶ್ವರ ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಪೆಟ್ರೋಲ್, ಡೀಜಲ್ ಮತ್ತು ಅಡುಗೆ ಅನಿಲ ಗಗನಕ್ಕೇರುತ್ತಿರುವುದನ್ನು ವಿರೋಧಿಸಿ ವಿಜಯಪುರ ಜಿಲ್ಲೆಯ ಬಬಲೇಶ್ವರದಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಸೈಕಲ್ ರ‌್ಯಾಲಿ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಪ್ರತಿಯೊಂದು ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯರು ಜೀವನ ನಡೆಸುವುದು ಕಷ್ಟವಾಗಿದೆ. ಇಂಥ ಜನವಿರೋಧಿ ಸಂವೇದನೆಯನ್ನೇ ಕಳೆದುಕೊಂಡಿರುವ ಅಮಾನವೀಯ ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರಕಾರಗಳನ್ನು ಕಿತ್ತೊಗೆಯುವವರೆಗೆ ಕಾರ್ಯಕರ್ತರು ವಿಶ್ರಮಿಸಬಾರದು ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಜಿ. ಪಂ. ಮಾಜಿ ಪಂಚಾಯಿತಿ ಅಧ್ಯಕ್ಷ ವಿ. ಎಸ್. ಪಾಟೀಲ, ಕೆಪಿಸಿಸಿ ಉಸ್ತುವಾರಿ ಕಾರ್ಯದರ್ಶಿ ರಾಜಶೇಖರ ಮೆಣಸಿನಕಾಯಿ, ಬಬಲೇಶ್ವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈರನಗೌಡ ಬಿರಾದಾರ, ತಿಕೋಟಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಗೌಡನವರ. ಕಾಂಗ್ರೆಸ್ ಮುಖಂಡರಾದ ಮಲ್ಲಿಕಾರ್ಜುನ ಮರ್ಯಾಣಿ, ಪರಸು ಪಡಗಾರ, ಹನಮಂತ ಬಡಚಿ, ಪ್ರವೀಣ ಪಾಟೀಲ, ಡಾ. ಬೀಳೂರ,ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್ ನಾನಾ ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌