ಕಟ್ಟಡ ಕಾರ್ಮಿಕರಿಗೆ ಆಹಾರ ಕಿಟ್ ಗಳನ್ನು ವಿತರಿಸಿದ ಬಿಜೆಪಿ ಸಂಸದ, ವಿಧಾನ ಪರಿಷತ ಸದಸ್ಯ

ವಿಜಯಪುರ: ಕೊರೊನಾ ಮತ್ತು ಲಾಕಡೌನ್ ನಿಂದಾಗಿ ತೀವ್ರ ಸಂಕಷ್ಟದಲ್ಲಿರುವ ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಮತ್ತು ವಿಧಾನ ಪರಿಷತ ಬಿಜೆಪಿ ಸದಸ್ಯ ಅರುಣ ಶಹಾಪುರ ಅವರು ಆಹಾರ ಕಿಟ್ ವಿತರಿಸಿದರು. ವಿಜಯಪುರ ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಅಡಿಯಲ್ಲಿ ಆಯೋಜಿಸಲಾಗಿತ್ತು. ಕಾರ್ಮಿಕ ಅಧಿಕಾರಿ ಹಾಗೂ ಕಾರ್ಮಿಕ ನಿರೀಕ್ಷಕರ ಕಛೇರಿಗಳಲ್ಲಿ ಹೆಸರು ನೋಂದಾಯಿಸಿಕೊಂಡ ಕಟ್ಟಡ ಕಾರ್ಮಿಕರಿಗೆ ಜಿಲ್ಲಾ […]

ವಿಜಯಪುರದ ಪ್ರತಿಷ್ಠಿತ ಬಿ ಎಲ್ ಡಿ ಇ ಆಸ್ಪತ್ರೆಯಲ್ಲಿ ಜು. 12 ರಿಂದ ಸ್ಪುಟ್ನಿಕ್ ಲಸಿಕೆ ಲಭ್ಯ- ಉಪಕುಲಪತಿ ಡಾ. ಆರ್. ಎಸ್. ಮುಧೋಳ

ವಿಜಯಪುರ: ವಿಜಯಪುರದ ಪ್ರತಿಷ್ಠಿತ ಬಿ ಎಲ್ ಡಿ ಇ ಡೀಮ್ಡ್ ವಿಶ್ವವಿದ್ಯಾಲಯದ ಬಿ. ಎಂ. ಪಾಟೀಲ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕೊರೊನಾ ಸೋಂಕು ತಡೆಗಟ್ಟುವ ಸ್ಪುಟ್ನಿಕ್ ಲಸಿಕೆ ಜು. 12 ಸೋಮವಾರದಿಂದ ಲಭ್ಯವಿದೆ ಎಂದು ಉಪಕುಲಪತಿ ಡಾ. ಆರ್. ಎಸ್. ಮುಧೋಳ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಸ್ಪುಟ್ನಿಕ್ ಲಸಿಕೆ ಕೊರೊನಾ ಸೋಂಕನ್ನು ಶೇ.92 ರಷ್ಟು ತಡೆಗಟ್ಟುವ ದಕ್ಷತೆಯನ್ನು ಹೊಂದಿದೆ. ಈ ಲಸಿಕೆಯನ್ನು ಸಾರ್ವಜನಿಕರಿಗೆ ಬಿ ಎಲ್ ಡಿ ಇ ಸೂಪರ್ […]

ಕೆ ಆರ್ ಎಸ್ ಡ್ಯಾಂ ನಲ್ಲಿ ಯಾವುದೇ ಬಿರುಕು ಇಲ್ಲ-ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ ನಿರಾಣಿ

ವಿಜಯಪುರ: ಕೆ ಆರ್ ಎಸ್ ಜಲಾಷಯದಲ್ಲಿ ಯಾವುದೇ ಬಿರುಕು ಬಿಟ್ಟಿಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ ನಿರಾಣಿ ಮತ್ತೋಮ್ಮೆ ಸ್ಪಷ್ಟಪಡಿಸಿದ್ದಾರೆ. ವಿಜಯಪುರ ಜಿಲ್ಲೆಯ ಅಲಿಯಾಬಾದ್ ಗ್ರಾಮದ ಹೊರವಲಯದಲ್ಲಿ ನಡೆದ ಕಲ್ಲು ಗಣಿ ಗಣಿ ದುರಂತ ಸ್ಥಳಕ್ಕೆ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ ನಿರಾಣಿ ರಾತ್ರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿದ ಅವರು, ಕೆ ಆರ್ ಎಸ್ ನಲ್ಲಿ ಯಾವುದೇ ಬಿರುಕು ಇಲ್ಲ. ಅಲ್ಲಿರುವ ಮುಖ್ಯ ಎಂಜಿನಿಯರ್ ಸ್ವತಃ […]