ರವಿವಾರ ರಜಾ ದಿನವೂ ನಗರದ ನಾನಾ ಅಭಿವೃದ್ದಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ವಿಜಯಪುರ: ರವಿವಾರ ರಜೆ ದಿನವಾಗಿರುವುದರಿಂದ ಬಹುತೇಕ ಅಧಿಕಾರಿಗಳು ರಜೆಯಲ್ಲಿರುವುದು ಮಾಮೂಲು. ಆದರೆ, ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಮಾತ್ರ ರಜೆ ದಿನವಾಗಿದ್ದರೂ ವಿಜಯಪುರ ನಗರದ ನಾನಾ ಸ್ಥಳಗಳಲ್ಲಿ ಮಹಾನಗರಪಾಲಿಕೆ ವತಿಯಿಂದ ಕೈಗೊಳ್ಳಲಾಗುತ್ತಿರುವ ಅಭಿವೃದ್ಧಿ ಕಾಮಗಾರಿಗಳು ಮತ್ತು ನಾನಾ ಯೋಜನೆಗಳಲ್ಲಿ ಮಂಜೂರಾದ ಕಾಮಗಾರಿಗಳನ್ನು ಪರಶೀಲನೆ ನಡೆಸಿದರು. ಮೊದಲಿಗೆ ಡಾ. ಬಿ. ಆರ್. ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಾರ್ಯಾಲಯದ ವರೆಗೆ ನಡೆಯುತ್ತಿರುವ ಸಿಸಿ ರಸ್ತೆ ಮತ್ತು ಫುಟ್ ಪಾತ್ ಕಾಮಗಾರಿಯನ್ನು ವೀಕ್ಷಿಸಿದ ಅವರು, ಈ ಕಾಮಗಾರಿಯನ್ನು ನಿರ್ವಹಿಸುತ್ತಿರುವ ಗುತ್ತಿಗೆದಾರರಿಗೆ […]

ನೂತನ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಭೇಟಿ ಮಾಡಿ ಅಭಿನಂದಿಸಿದ ಡಿಸಿಎಂ ಗೋವಿಂದ ಕಾರಜೋಳ

ಬೆಂಗಳೂರು: ನೂತನ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅವರನ್ನು ಡಿಸಿಎಂ ಗೋವಿಂದ ಕಾರಜೋಳ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಬೆಂಗಳೂರಿನಲ್ಲಿ ಥಾವರಚಂದ ಗೆಹ್ಲೋಟ್ ಬೆಳಿಗ್ಗೆ ರಾಜ್ಯದ ‌ನೂತನ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ಪೀಕರಿಸಿದ್ದರು. ಈ ಹಿನ್ನೆಲೆಯಲ್ಲಿ ಡಿಸಿಎಂ ಗೋವಿಂದ ಕಾರಜೋಳ ರಾಜಭನಕ್ಕೆ ತೆರಳಿ, ಥಾವರಚೆಂದ ಗೆಹ್ಲೋಟ ಅವರನ್ನು ಅಭಿನಂದಿಸಿ, ಶುಭಾಷಯ ಕೋರಿದರು‌‌.

ನೂತನ ರಾಜ್ಯಪಾಲರಾಗಿ ಥಾವರಚಂದ ಗೆಹ್ಲೋಟ್ ಅಧಿಕಾರ ಸ್ವೀಕಾರ

ಬೆಂಗಳೂರು- ರಾಜ್ಯದ ನೂತನ ರಾಜ್ಯಪಾಲರಾಗಿ ಥಾವರಚಂದ ಗೆಹ್ಲೋಟ ಪ್ರತಿಜ್ಞಾ ವಿಧಿ ಸ್ವೀಕರಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ ಶ್ರೀನಿವಾಸ ಓಕಾ ಪ್ರತಿಜ್ಞಾ ವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಈ ಸಮಾರಂಭದಲ್ಲಿ ಭಾಗವಹಿಸಿ ನೂತನ ರಾಜ್ಯಪಾಲರಿಗೆ ಶುಭ ಕೋರಿದರು. ನಿರ್ಗಮಿತ ರಾಜ್ಯಪಾಲ ವಜುಭಾಯಿ ವಾಲಾ ಸೇರಿದಂತೆ ನಾನಾ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಹುತಾತ್ಮ ಯೋಧನ ಪತ್ನಿಗೆ ಬಿ ಎಲ್ ಡಿ ಇ ಶಿಕ್ಷಣ ಸಂಸ್ಥೆಯಲ್ಲಿ ಉದ್ಯೋಗದ ಭರವಸೆ ನೀಡಿದ ಎಂ ಎಲ್ ಸಿ ಸುನೀಲಗೌಡ ಪಾಟೀಲ

ವಿಜಯಪುರ: ಕಾಶ್ಮೀರದ ಪುಲ್ವಾಮಾದಲ್ಲಿ ಭಯೋತ್ಪಾದಕರ ಧಾಳಿಯಲ್ಲಿ ಹುತಾತ್ಮನಾದ ವೀರಯೋಧ ಕಾಶೀರಾಯ ಬೊಮ್ಮನಹಳ್ಳಿ ನಿವಾಸಕ್ಕೆ ವಿಧಾನ ಪರಿಷತ ಸದಸ್ಯ ಸುನೀಲಗೌಡ ಪಾಟೀಲ ಭೇಟಿ ನೀಡಿದರು. ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿಯ ಯೋಧ ಕಾಶೀರಾಯ ಬೊಮ್ಮನಹಳ್ಳಿ ಜು. 2 ರಂದು ಭಯೋತ್ಪಾದಕತ ಧಾಳಿಯಲ್ಲಿ ಹುತಾತ್ಮರಾಗಿದ್ದರು. ಇಂದು ವೀರಯೋಧನ ನಿವಾಸಕ್ಕೆ ಭೇಟಿ ನೀಡಿದ ಸುನೀಲಗೌಡ ಪಾಟೀಲ ಯೋದನ‌ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಹುತಾತ್ಮ ಯೋಧನ ಪತ್ನಿ ಸಂಗೀತಾ ಅವರಿಗೆ ಬಿ ಎಲ್ ಡಿ ಇ […]