ರಾಷ್ಟ್ರೀಯ ಡಿಫೆನ್ಸ್ ಅಕಾಡೆಮಿ ಮಾದರಿಯಲ್ಲಿ ಕರ್ನಾಟಕ ಪೊಲೀಸ್ ಅಧಿಕಾರಿಗಳಿಗೆ ತರಬೇತಿ- ಗೃಹ ಸಚಿವ ಬಸವರಾಜ ಬೊಮ್ಮಾಯಿ

ಮೈಸೂರು: ಆಡಳಿತಾತ್ಮಕ ಸುಧಾರಣೆಗೆ ಎಲ್ಲರೂ ಕಾಲಕ್ಕೆ ತಕ್ಕಂತೆ ಬದಲಾಗಬೇಕು.‌ ಈ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳಿಗೆ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ( NDA)ಮಾದರಿಯಲ್ಲಿ ಅತ್ಯುತ್ತಮ ಗುಣಮಟ್ಟದ ತರಬೇತಿ ನೀಡಲು ತೀರ್ಮಾನಿಸಲಾಗಿದೆ ಎಂದು ಗೃಹ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮೈಸೂರಿನ ಕರ್ನಾಟಕ ಪೊಲೀಸ್ ಅಕಾಡೆಮಿ ಆವರಣದಲ್ಲಿ ನಡೆದ 35ನೇ ಪ್ರೊಬೆಷನರಿ ಪೋಲೀಸ್ ಉಪ ಅಧೀಕ್ಷಕರು ಹಾಗೂ ಅಬಕಾರಿ ಉಪ ಅಧೀಕ್ಷಕರು ಮತ್ತು 43 ಮೇ ತಂಡದ ಪ್ರೊಬೇಶನರಿ ಪೊಲೀಸ್ ಉಪ ನಿರೀಕ್ಷಕರ ನಿರ್ಗಮನ […]

ವಿಜಯಪುರ ನೂತನ ಎಸ್ಪಿಯಾಗಿ ಎಚ್. ಡಿ. ಆನಂದ ಕುಮಾರ- ವಿಜಯಪುರ ಜಿಲ್ಲೆಗೂ ನೂತನ ಎಸ್ಪಿಗೂ ಯಾವ ನಂಟಿದೆ ಗೊತ್ತಾ?

ವಿಜಯಪುರ: ವಿಜಯಪುರ ನೂತನ ಎಸ್ಪಿಯಾಗಿ ಆಂತರಿಕ ಭದ್ರತೆ ವಿಭಾಗದ ಎಸ್ಪಿಯಾಗಿರುವ ಎಚ್. ಡಿ. ಆನಂದ ಕುಮಾರ ಅವರನ್ನು ಸರಕಾರ ವರ್ಗಾವಣೆ ಮಾಡಿದೆ. ಎಚ್. ಡಿ. ಆನಂದ ಕುಮಾರ 2012ನೇ ವರ್ಷದ ಐಪಿಎಸ್ ಅಧಿಕಾರಿಯಾಗಿದ್ದು, ಈಗಾಗಲೇ ಚಾಮರಾಜನಗರ ಸೇರಿದಂತೆ ನಾನಾ ಕಡೆ ಎಸ್ಪಿಯಾಗಿ ಸೇವೆ ಸಲ್ಲಿಸಿದ್ದಾರೆ. ಎಚ್. ಡಿ. ಆನಂಗ ಕುಮಾರ ಅವರಿಗೂ ವಿಜಯಪುರಕ್ಕೂ ಹಳೆಯ ನಂಟಿದೆ. ಈ ಹಿಂದೆ ವಿಜಯಪುರ ನಗರದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಆರೋಪ ಪ್ರಕರಣವನ್ನು ಸರಕಾರ ಸಿಐಡಿಗೆ […]

ವಿಜಯಪುರ ಎಸ್ಪಿ ಅನುಪಮ ಅಗ್ರವಾಲ ವರ್ಗಾವಣೆ, ಎಚ್. ಡಿ. ಆನಂದ ಕುಮಾರ ನೂತನ ಎಸ್ಪಿ

ವಿಜಯಪುರ: ವಿಜಯಪುರ ಎಸ್ಪಿ ಅನುಪಮ ಅಗ್ರವಾಲ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಕಳೆದ ಒಂದೂವರೆ ವರ್ಷದಿಂದ ಎಸ್ಪಿಯಾಗಿದ್ದ ಅನುಪಮ ಅಗ್ರವಾಲ ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದರು. ಅನುಪಮ ಅಗ್ರವಾಲ ಅವರ ಜಾಗಕ್ಕೆ ಆಂತರಿಕ ಭದ್ರತೆ ವಿಭಾಗದ ಎಸ್ಪಿಯಾಗಿರುವ ಎಚ್. ಡಿ. ಆನಂದ ಕುಮಾರ ಅವರನ್ನು ವಿಜಯಪುರದ ನೂತನ ಎಸ್ಪಿಯನ್ನಾಗಿ ವರ್ಗಾವಣೆ ಮಾಡಲಾಗಿದೆ. ವಿಜಯಪುರದಿಂದ ವರ್ಗಾವಣೆ ಮಾಡಿರುವ ಅನುಪಮ ಅಗರವಾಲ ಅವರಿಗೆ ಯಾವುದೇ ಜಾಗವನ್ನು ತೋರಿಸಲಾಗಿಲ್ಲ. ಈ ಇಬ್ಬರೂ ಐಪಿಎಸ್ ಆಧಿಕಾರಿಗಳನ್ನು ವರ್ಗಾವಣೆ ಮಾಡಿ ಸರಕಾರದ […]