ವಿಜಯಪುರ ನೂತನ ಎಸ್ಪಿಯಾಗಿ ಎಚ್. ಡಿ. ಆನಂದ ಕುಮಾರ- ವಿಜಯಪುರ ಜಿಲ್ಲೆಗೂ ನೂತನ ಎಸ್ಪಿಗೂ ಯಾವ ನಂಟಿದೆ ಗೊತ್ತಾ?

ವಿಜಯಪುರ: ವಿಜಯಪುರ ನೂತನ ಎಸ್ಪಿಯಾಗಿ ಆಂತರಿಕ ಭದ್ರತೆ ವಿಭಾಗದ ಎಸ್ಪಿಯಾಗಿರುವ ಎಚ್. ಡಿ. ಆನಂದ ಕುಮಾರ ಅವರನ್ನು ಸರಕಾರ ವರ್ಗಾವಣೆ ಮಾಡಿದೆ.

ಎಚ್. ಡಿ. ಆನಂದ ಕುಮಾರ 2012ನೇ ವರ್ಷದ ಐಪಿಎಸ್ ಅಧಿಕಾರಿಯಾಗಿದ್ದು, ಈಗಾಗಲೇ ಚಾಮರಾಜನಗರ ಸೇರಿದಂತೆ ನಾನಾ ಕಡೆ ಎಸ್ಪಿಯಾಗಿ ಸೇವೆ ಸಲ್ಲಿಸಿದ್ದಾರೆ.

ಎಚ್. ಡಿ. ಆನಂಗ ಕುಮಾರ ಅವರಿಗೂ ವಿಜಯಪುರಕ್ಕೂ ಹಳೆಯ ನಂಟಿದೆ. ಈ ಹಿಂದೆ ವಿಜಯಪುರ ನಗರದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಆರೋಪ ಪ್ರಕರಣವನ್ನು ಸರಕಾರ ಸಿಐಡಿಗೆ ವಹಿಸಿದಾಗ ಇದೇ ಆನಂದ ಕುಮಾರ ವಿಜಯಪುರಕ್ಕೆ ಆಗಮಿಸಿ ಪ್ರಕರಣದ ತನಿಖೆ ನಡೆಸಿದ್ದರು.

ಅಷ್ಟೇ ಅಲ್ಲ, ಭೀಮಾ ತೀರದ ಧರ್ಮರಾಜ ಚಡಚಣ ನಕಲಿ ಎನಕೌಂಟರ್ ಮತ್ತು ಆತನ ಸಹೋದರ ಗಂಗಾಧರ ಚಡಚಣ ನಿಗೂಢ ಕೊಲೆ ಆರೋಪ ಪ್ರಕರಣವನ್ನು ಸಿಐಡಿ ಗೆ ವಹಿಸಿದಾಗ ಇದೇ ಎಚ್. ಡಿ. ಆನಂದ ಕುಮಾರ ವಿಜಯಪುರಕ್ಕೆ ಆಗಮಿಸಿ ತನಿಖೆ ನಡೆಸಿ ವರದಿ ಸಲ್ಲಿಸಿದ್ದರು.

ಇನ್ನು ಮುಂದೆ ಎಚ್. ಡಿ. ಆನಂದ ಕುಮಾರ ವಿಜಯಪುರ ನೂತನ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.

Leave a Reply

ಹೊಸ ಪೋಸ್ಟ್‌