ಗ್ರಾ‌ ಪಂ. ಸದಸ್ಯರು ಕೇವಲ ಶಾಸಕರ ಅವಲಂಬಿಸದೆ ಪ್ರಾಮಾಣಿಕವಾಗಿ ಅಭಿವೃದ್ಧಿಗೆ ಕೈಜೋಡಿಸಬೇಕು- ಸುನೀಲಗೌಡ ಪಾಟೀಲ

ವಿಜಯಪುರ: ಗ್ರಾಮಗಳ ಅಭಿವೃದ್ಧಿಗೆ ಗ್ರಾ. ಪಂ. ಸದಸ್ಯರು ಕೇವಲ ಶಾಸಕರನ್ನು ಅವಲಂಬಿಸದೇ ತಾವೂ ಕೂಡ ಪ್ರಾಮಾಣಿಕವಾಗಿ ಕೈಜೋಡಿಸಿದರೆ ಅಭಿವೃದ್ಧಿ ಕಾರ್ಯಗಳು ವೇಗವಾಗಿ ಆಗುತ್ತವೆ ಎಂದು ವಿಜಯಪುರ-ಬಾಗಲಕೋಟ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ ಕಾಂಗ್ರೆಸ್ ಸದಸ್ಯ ಸುನೀಲಗೌಡ ಪಾಟೀಲ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ತೊರವಿ ಗ್ರಾಮದ ಲಕ್ಷ್ಮೀ ದೇವಸ್ಥಾನದಲ್ಲಿ ತಿಕೋಟಾ ತಾಲೂಕಿನ ಗ್ರಾ. ಪಂ. ನೂತನ ಸದಸ್ಯರನ್ನು ಸನ್ಮಾನಿಸಿ ಮಾತನಾಡಿದ ಅವರು, ಕೊರೊನಾ ಕಾಯಿಲೆ ಅಥವಾ ಇನ್ನಿತರ ಕಾಯಿಲೆಗಳನ್ನು ಹೋಗಲಾಡಿಸಲು ಗ್ರಾಮಗಳ ಸ್ವಚ್ಚತೆ ಬಗ್ಗೆ ಜನರಲ್ಲಿ ಜಾಗೃತಿ […]

ಕೇಂದ್ರ ಸರಕಾರದ ಯೋಜನೆಗಳು ಫಲಾನುಭವಿಗಳಿಗೆ ತಲುಪುವಂತೆ ನೋಡಿಕೊಳ್ಳಲಿ ಅಧಿಕಾರಿಗಳಿಗೆ ಸಂಸದ ರಮೇಶ ಜಿಗಜಿಣಗಿ ಕರೆ

ವಿಜಯಪುರ: ಕೇಂದ್ರ ಸರಕಾರದಿಂದ ಲಭ್ಯವಾಗುವ ಎಲ್ಲ ಯೋಜನೆಗಳು ಫಲಾನುಭವಿಗಳಿಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದು ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಜಯಪುತ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೇಂದ್ರ ಸರಕಾರದ ನಾನಾ ಯೋಜನೆಗಳ ದಿಶಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದತು. ರೈತರ ಅನುಕೂಲಕ್ಕಾಗಿ ವಿದ್ಯುತ್ ಟ್ರಾನ್ಸಫಾರ್ಮರ್ ಸಮಸ್ಯೆ ಸೇರಿದಂತೆ ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಬೇಕು ಎಂದು ಹೆಸ್ಕಾಂ ಮತ್ತು ಕೆಪಿಟಿಸಿಎಲ್ ಅಧಿಕಾರಿಗಳಿಗೆ ಸೂಚಿನೆ ನೀಡಿದರು. ಜಿಲ್ಲೆಯಲ್ಲಿರುವ ಸರಕಾರಿ ಶಾಲೆಗಳ ಕಟ್ಟಡ […]

ಕೆಪಿಟಿಸಿಎಲ್ ಅಧಿಕಾರಿ ಸಿದ್ದನಗೌಡ ಮಲ್ಲಿಕಾರ್ಜುನ ಬಿರಾದಾರಗೆ ಬೆಳ್ಳಂಬೆಳಿಗ್ಗೆ ಶಾಕ್ ನೀಡಿದ ಎಸಿಬಿ ಅಧಿಕಾರಿಗಳು

ವಿಜಯಪುರ: ಕೆಪಿಟಿಸಿಎಲ್ ಭ್ರಷ್ಟ ಅಧಿಕಾರಿ ನಿವಾಸದ ಮೇಲೆ ಧಾಳಿ ನಡೆಸುವ ಮೂಲಕ ಎಸಿಬಿ ಅಧಿಕಾರಿಗಳು ಅಧಿಕಾರಿಗೆ ಬೆಳ್ಳಂಬೆಳಿಗ್ಗೆ ಶಾಕ್ ನೀಡಿದ್ದಾರೆ. ವಿಜಯಪುರದಲ್ಲಿ ಬೆಳ್ಳಂಬೆಳಿಗ್ಗೆ ಎಸಿಬಿ ಅಧಿಕಾರಿಗಳು ಧಾಳಿ ನಡೆಸಿದ್ದು, ಕೆಪಿಟಿಟಿಎಲ್ ಭ್ರಷ್ಟ ಅಧಿಕಾರಿ ಸಿದ್ಧರಾಮ ಮಲ್ಲಿಕಾರ್ಜುನ ಬಿರಾದಾರ ಮತ್ತು ಸಂಬಂಧಿಕರಿಗೆ ಸೇರಿದ ಸೇರಿದ ಆರು ಕಡೆಗಳಲ್ಲಿ ಏಕಕಾಲಕ್ಕೆಎಸಿಬಿ ಧಾಳಿ ಮಾಡಿದ್ದಾರೆ. ಕೆಪಿಟಿಸಿಎಲ್ ಕಚೇರಿಯಲ್ಲಿ ಎಇಇ ಆಗಿರುವ ಸಿದ್ದರಾಮ ಮಲ್ಲಿಕಾರ್ಜುನ ಬಿರಾದಾರ ಈಗ ಪ್ರಭಾರ ಎಕ್ಸಿಕ್ಯೂಟಿವ್ ಎಂಜಿನಿಯರ್ ಕೂಡ ಆಗಿದ್ದಾರೆ‌. ವಿಜಯಪುರ ನಗರದ ಸುಕೂನ್ ಲೇ ಔಟ್ ನಲ್ಲಿರುವ […]