ಬೆಳಗಾವಿ ಜಿಲ್ಲೆಯ ನಾಗನೂರ ರುದ್ರಾಕ್ಷಿಮಠಕ್ಕೆ ಮಾಜಿ ಸಚಿವ ಎಂ. ಬಿ. ಪಾಟೀಲ ಬೇಟಿ, ಮಹತ್ವದ ಚರ್ಚೆ

ಬೆಳಗಾವಿ: ಬೆಳಗಾವಿ ಜಿಲ್ಲೆಯ ಸದಾಶಿವ ನಗರದ ನಾಗನೂರ ರುದ್ರಾಕ್ಷಿಮಠಕ್ಕೆ ಮಾಜಿ ಸಚಿವ ಎಂ. ಬಿ. ಪಾಟೀಲ ಭೇಟಿ ನೀಡಿ ಲಿಂಗೈಕ್ಯ ಶಿವಬಸವ ಸ್ವಾಮಿಗಳ, ಪ್ರಭು ಸ್ವಾಮಿಗಳ ಗದ್ದುಗೆಯ ದರ್ಶನ ಪಡೆದರು.

ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಲಿಂಗೈಕ್ಯ ಫ. ಗು. ಹಳಕಟ್ಟಿಯವರು ತಾವೇ ಪ್ರಕಟಿಸಿದ ಶಿವಾನುಭವ ಪತ್ರಿಕೆಯನ್ನು ಶೇಖರಿಸುವ ಕಾರ್ಯ ನಾಗನೂರ ರುದ್ರಾಕ್ಷಿಮಠ ಮಾಡಿದೆ. ‌ಅದರ ಮರು ಮುದ್ರಣಕ್ಕೆ ತಾವು ಈಗಾಗಲೇ ಮುಖ್ಯಮಂತ್ರಿಗಳನ್ನು ಬೇಟಿ ಮಾಡಿ ಮಾತುಕತೆ ನಡೆಸಿರುವುದಾಗಿ ತಿಳಿಸಿದರು.

ಬಸವಣ್ಣನವರ ಮತ್ತು ಬಸವಾದಿ ಶರಣರ ವಚನಗಳ ಸಮಗ್ರ ಮಾಹಿತಿಯನ್ನು ಒದಗಿಸುವಂತಹ ಅಂತರಾಷ್ಟ್ರೀಯ ಮಟ್ಟದಲ್ಲಿ ವಚನ ಸಾಹಿತ್ಯದ ಗ್ರಂಥಾಲಯ ನಿರ್ಮಿಸುವ ಉದ್ದೇಶವನ್ನು ಹೊಂದಿದ್ದೇವೆ. ಈ ಎಲ್ಲ ವಿಚಾರಗಳನ್ನು ಪೂಜ್ಯರೊಂದಿಗೆ ಚರ್ಚಿಸಲು ಆಗಮಿಸಿರುವುದಾಗಿ ತಿಳಿಸಿದರು.

ಈ ಮಧ್ಯೆ, ಎಂ. ಬಿ. ಪಾಟೀಲ ಅವರು, ಗದುಗಿನ ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಮತ್ತು ಡಾ. ಅಲ್ಲಮಪ್ರಭು ಮಹಾಸ್ವಾಮಿಗಳೊಂದಿಗೆ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಿ ಪೂಜ್ಯರ ಆಶೀರ್ವಾದ ಪಡೆದರು.

ಇದೇ ವೇಳೆ ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ಮುಖಂಡರು, ಲಿಂಗಾಯತ ಸಮಾಜದ ಮುಂಖಂಡರು ಎಂ. ಬಿ. ಪಾಟೀಲ ಅವರನ್ನು ಗೌರವಿಸಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಚಿಕ್ಕೊಡಿ ಮಾಜಿ ಸಂಸದ ಪ್ರಕಾಶ ಹುಕ್ಕೇರಿ, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಕಾಂಗ್ರೆಸ್ ಜಿಲ್ಲಾದಕ್ಷ ವಿನಯ ನಾವಲಗಟ್ಟಿ, ಅಥಣಿ ಮುಖಂಡ ಧರೇಪ್ಪ ಠಕ್ಕಣ್ಣವರ, ಬಾಬಾಸಾಹೇಬ ಪಾಟೀಲ, ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಬಸವರಾಜ ರೊಟ್ಟಿ, ಬಸವಸೇನಾ ಅಧ್ಯಕ್ಷ ಶಂಕರ ಗುಡಸ, ಮಹಾಂತೇಶ ಮತ್ತಿಕೊಪ್ಪ, ಆನಂದ ಗಡದೇವರಮಠ, ರಾಜಿ ಶೇಟ್ ಮುಂತಾದವರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌