ಬಸವನ ಬಾಗೇವಾಡಿ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಅಶೋಕ‌ ಹಾರಿವಾಳ ಅವಿರೋಧ ಆಯ್ಕೆ

ವಿಜಯಪುರ: ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಅಶೋಕ ಹಾರಿವಾಳ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಬಸವನ ಬಾಗೇವಾಡಿ ಪುರಸಭೆ ಕಾಂಗ್ರೆಸ್ ಸದಸ್ಯೆಅಗಿರುವ ಅಶೋಕ ಹಾರಿವಾಳ ಮೊದಲ ಬಾರಿ ಪುರಸಭೆಗೆ ಆಯ್ಕೆಯಾಗಿದ್ದಾರೆ.

ತಾವು ಅವಿರೋಧವಾಗಿ ಆಯ್ಕೆಯಾಗಲು ಬಸವನ ಬಾಗೇವಾಡಿ ಕಾಂಗ್ರೆಸ್ ಶಾಸಕ ಶಿವಾನಂದ ಪಾಟೀಲ ಅವರೇ ಕಾರಣ. ಶಾಸಕರಿಗೆ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ಅಶೋಕ ಹಾರಿವಾಳ ತಿಳಿಸಿದ್ದಾರೆ.

ಅಶೋಕ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಯುವ ಘಟಕದ ಅಧ್ಯಕ್ಷರಾಗಿಯೂ ಕನ್ನಡ ಪರ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದಾರೆ.

Leave a Reply

ಹೊಸ ಪೋಸ್ಟ್‌