ಎಸ್ ಎಸ್ ಎಲ್ ಸಿ ಪರೀಕ್ಷೆ ವಿದ್ಯಾರ್ಥಿಗಳಿಗೆ, ಪರೀಕ್ಷಾ ಸಿಬ್ಬಂದಿಗೆ ಶುಭ ಕೋರಿದ ಎಂ ಎಲ್ ಸಿ ಅರುಣ ಶಹಾಪುರ

ವಿಜಯಪುರ: ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಮತ್ತು ಪರೀಕ್ಷಾ ಸಿಬ್ಬಂದಿಗೆ ವಿಧಾನ ಪರಿಷತ ಬಿಜೆಪಿ ಸದಸ್ಯ ಅರುಣ ಶಹಾಪುರ ಶುಭ ಕೋರಿದ್ದಾರೆ.

ಈ ಕುರಿತು ಸಂದೇಶ ನೀಡಿರುವ ಅವರು, ಈ ಮಹಾಮಾರಿ ಕೊರೊನಾ ಸಂಕಷ್ಟದ ನಡುವೆ ಜೀವನ ಸಾಗಿಸುವ ಜೊತೆಗೆ, ನಮ್ಮ ವಿದ್ಯಾರ್ಥಿಗಳ ಮುಂದಿನ ಭವಿಷ್ಯದ ದೃಷ್ಠಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ನಡೆಸುವುದು ಅನಿವಾರ್ಯ. ಸರಕಾರವು ಶಿಕ್ಷಕರ ಹಾಗೂ ವಿದ್ಯಾರ್ಥಿಗಳ ಎಲ್ಲ ರೀತಿಯ ಸುರಕ್ಷತೆಯ ದೃಷ್ಠಿಯಿಂದ ಸ್ಯಾನಿಟೈಸರ್, ಮಾಸ್ಕ್, ಕುಡಿಯುವ ನೀರು, ಪ್ರಯಾಣದ ವ್ಯವಸ್ಥೆಯನ್ನು ಮಾಡಿದೆ. ನಮ್ಮ ಪೋಷಕರೂ ಸಹ ಯಾವುದೇ ಆತಂಕ ಪಡದೇ ವಿದ್ಯಾರ್ಥಿಗಳನ್ನು ಹುರುದುಂಬಿಸಿ ಪರೀಕ್ಷಾ ಕೇಂದ್ರಕ್ಕೆ ಕಳುಹಿಸಿ ಕೊಡಬೇಕು.

ಬಿಜೆಪಿ ಎಂ ಎಲ್ ಸಿ ಅರುಣ ಶಹಾಪುರ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು, ಪರೀಕ್ಷಾ ಸಿಬ್ಬಂದಿಗೆ ಶುಭ ಕೋರಿರುವ ಪತ್ರ

ಈ ಪರೀಕ್ಷಾ ಕಾರ್ಯದಲ್ಲಿ ತೊಡಗುವ ನನ್ನೆಲ್ಲ ಆತ್ಮೀಯ ಶಿಕ್ಷಕರು, ಶಾಲಾ ಸಿಬ್ಬಂದಿ ವರ್ಗ, ಅಧಿಕಾರಿಗಳು ಹಾಗೂ ಎಲ್ಲ ಶೈಕ್ಷಣಿಕ ಸಂಸ್ಥೆಗಳ ಆಡಳಿತ ಮಂಡಳಿಗಳು ಸರಕಾರದ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಸುರಕ್ಷಿತ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಯಶಸ್ವಿಗೊಳಿಸಬೇಕು ಎಂದು ಹಾಗೂ ಪರೀಕ್ಷೆ ಎದುರಿಸುತ್ತಿರುವ ಎಲ್ಲ ಮಕ್ಕಳಿಗೆ ಶುಭ ಕೋರುತ್ತಾ ಸುರಕ್ಷಿತ ಹಾಗೂ ಯಶಸ್ವಿ ಪರೀಕ್ಷೆಗೆ ಶುಭ ಹಾರೈಸುತ್ತೇನೆ ಎಂದು ಶುಭ ಸಂದೇಶ ಪತ್ರದಲ್ಲಿ ಅರುಣ ಶಹಾಪುರ ಶುಭ ಕೋರಿದ್ದಾರೆ.

Leave a Reply

ಹೊಸ ಪೋಸ್ಟ್‌