ಕೊರೊನಾದಿಂದ ಸಂಕಷ್ಟದಲ್ಲಿರುವ ದೀನ, ದಲಿತ, ಬಡವರ ಜನರಿಗೆ ಸ್ಪಂದಿಸಲು ರಾಜ್ಯ ಪ್ರವಾಸ ಕೈಗೊಂಡಿದ್ದೇನೆ- ಡಿ. ಕೆ. ಶಿವಕುಮಾರ

ವಿಜಯಪುರ: ರಾಜ್ಯ ಮತ್ತು ರಾಷ್ಟ್ರ ಇಂದು ಕೊರೊನಾದಿಂದ ಬಳಲುತ್ತಿದೆ. ಹೀಗಾಗಿ ಸಂಕಷ್ಟದಲ್ಲಿರಿವ ಜನರಿಗೆ ಸ್ಪಂದಿಸಲು ರಾಜ್ಯಾದ್ಯಂತ ಪ್ರವಾಸ ಕೈಗೊಂಡಿರುವುದಾಗಿ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ. ಕೆ. ಶಿವಕುಮಾರ ತಿಳಿಸಿದ್ದಾರೆ.

ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಮಾತನಾಡಿದ ಅವರು, ಜನರು, ದೀನ-ದಲಿತರು, ಅಲ್ಪಸಂಖ್ಯಾತರು, ಅಸಂಘಟಿತ ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ. ಕೊರೊಬಾದಿಂದ ಸತ್ತವರಿಗೆ ಪರಿಹಾರ ಸಿಕ್ಕಿಲ್ಲ. ಔಷಧಿ ಬಿಲ್ ಸಿಕ್ಕಿಲ್ಲ. ಸತ್ತವರಿಗೆ ಪರಿಹಾರ ಕೊಡಿಸಬೇಕಿದೆ. ಹೀಗಾಗಿ ಜನರ ಕುಂದು ಕೊರತೆ ಆಲಿಸಲು ರಾಜ್ಯಾದ್ಯಂತ ಪ್ರವಾಸ ನಡೆಸುತ್ತಿರುವುದಾಗಿ ಅವರು ತಿಳಿಸಿದರು.

ಕುಂದು ಕೊರತೆಗಳನ್ನ ನಾನೇ ಖುದ್ದಾಗಿ ಆಲಿಸಲು ಬಂದಿದ್ದೇನೆ. ನನ್ನ ಪ್ರವಾಸ ಚುನಾವಣೆಗೋಸ್ಕರವಲ್ಲ. ನಮಗೆ ರಾಜಕಾರಣ ಮುಖ್ಯವಲ್ಲ. ದಲಿತ ಸಮುದಾಯದ ಸಮಸ್ಯೆಗಳನ್ನು ಆಲಿಸಿ ಮುಂದಿನ ದಿನಗಳಲ್ಲಿ ಯೋಜನೆ ರೂಪಿಸಲು ಪ್ರವಾಸ ಕೈಗೊಂಡಿರುವುದಾಗಿ ಡಿ. ಕೆ. ಶಿವಕುಮಾರ ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಎಂ. ಬಿ. ಪಾಟೀಲ, ವಿಜಯಪುರ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರೊ. ರಾಜು ಆಲಗೂರ, ಕಾಂಗ್ರೆಸ್ ಮುಖಂಡ ಎಸ್. ಎಂ. ಪಾಟೀಲ ಗಣಿಹಾರ ಸೇರಿದಂತೆ ನಾನಾ ಮುಖಂಡರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌