ಯಡಿಯೂರಪ್ಪರನ್ನು ಪದಚ್ಯುತಿ ಮಾಡಿದರೆ ಬಿಜೆಪಿ ವರಿಷ್ಠರು ಲಿಂಗಾಯಿತರ ಅವಕೃಪೆ ಎದುರಿಸಬೇಕಾಗುತ್ತದೆ- ಎಂ. ಬಿ. ಪಾಟೀಲ ಎಚ್ಚರಿಕೆ

ವಿಜಯಪುರ: ಸಿಎಂ ಬಿ. ಎಸ್. ಯಡಿಯೂರಪ್ಪ ವಿರುದ್ಧ ಬಿಜೆಪಿಯಲ್ಲಿ ನಡೆಯುತ್ತಿರುವ ವಿಧ್ಯಮಾನಗಳ ಕುರಿತು ಮಾಜಿಬಸಚಿವ ಮತ್ತು‌ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ‌ ಟ್ವೀಟ್ ಮೂಲಕ‌ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಎಂ. ಬಿ. ಪಾಟೀಲ, ಕರ್ನಾಟಕ ಮುಖ್ಯಮಂತ್ರಿ @BSYBJP ಲಿಂಗಾಯತ ಸಮುದಾಯದ ಧೀಮಂತ ನಾಯಕರು. ಅವರನ್ನು ಪದಚ್ಯುತಗೊಳಿಸಿದರೆ, ನಿಶ್ಚಿತವಾಗಿಯೂ ಬಿಜೆಪಿ ವರಿಷ್ಠರು ಲಿಂಗಾಯತರ ಅವಕೃಪೆಗೆ ತುತ್ತಾಗುತ್ತಾರೆ. ಯಡಿಯೂರಪ್ಪನವರ ವಯಸ್ಸು ಮತ್ತು ಕೊಡುಗೆಯನ್ನು ಪರಿಗಣಿಸಿ, ಅವರನ್ನು ಘನತೆ ಮತ್ತು ಮರ್ಯಾದೆಯಿಂದ ನಡೆಸಿಕೊಳ್ಳಬೇಕೆಂಬುದು ನನ್ನ ವೈಯಕ್ತಿಕ ಅನಿಸಿಕೆ.

ಎಂದು ಟ್ವೀಟ್ ಮಾಡುವ ಮೂಲಕ ಎಂ. ಬಿ. ಪಾಟೀಲ ಲಿಂಗಾಯತ ಸಮುದಾಯದ ನಾಯಕ ವಿರುದ್ಧ ಬಿಜೆಪಿಯಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಟೀಕಾಸ್ತ್ರ ಪ್ರಯೋಗಿಸಿದ್ದಾರೆ.

Leave a Reply

ಹೊಸ ಪೋಸ್ಟ್‌