ಸಿಎಂ ಬದಲಾವಣೆ ವಿರುದ್ಧ ಬಸವ ನಾಡಿನಲ್ಲಿ 20 ಸ್ವಾಮೀಜಿಗಳಿಂದ ಜಂಟಿ ಸುದ್ದಿಗೋಷ್ಠಿ- ಬೆಂಗಳೂರು, ದೆಹಲಿಯಲ್ಲಿ ಸಭೆಯ ಎಚ್ಚರಿಕೆ

ವಿಜಯಪುರ: ವಿಜಯಪುರದಲ್ಲಿ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ವೀರಶೈವ ಲಿಂಗಾಯಿತ ಮಠಗಳ 20 ಜನ ಸ್ವಾಮೀಜಿಗಳು ಜಂಟಿ ಸುದ್ದಿಗೋಷ್ಠಿ ನಡೆಸಿ ಸಿಎಂ ಬಿ. ಎಸ್. ಯಡಿಯೂರಪ್ಪ ಪರ ಭರ್ಜರಿ ಬ್ಯಾಟಿಂಗ್ ನಡೆಸಿದ್ದಾರೆ. ಯಡಿಯೂರಪ್ಪ ಅವರನ್ನು ಎರಡು ವರ್ಷಗಳ ಕಾಲ ಸಿಎಂ ಆಗಿ ಮುಂದುವರೆಸಬೇಕು. ಯಾವುದೇ ಕಾರಣಕ್ಕೂ ಬದಲಾವಣೆ ಮಾಡಬಾರದು. ‌ಒಂದು ವೇಳೆ ಬದಲಾವಣೆ ಮಾಡಿದರೆ ಉತ್ತರ ಕರ್ನಾಟಕದವರಿಗೆ ಆ ಸ್ಥಾನ ನೀಡಬೇಕು ಎಂದು ಮಠಾಧೀಶರು ಆಗ್ರಹಿಸಿದ್ದಾರೆ. ಬುರಣಾಪುರ ಸಿದ್ಧಾರೂಢ ಮಠದ ಯೋಗೇಶ್ವರಿ ಮಾತಾಜಿ ಮಾತನಾಡಿ, ಯಡಿಯೂರಪ್ಪ ಧೀಮಂತ […]