ಮಾಜಿ ಡಿಸಿಎಂ ಗೋವಿಂದ ಕಾರಜೋಳ ಅವರಿಂದ ಕೇಂದ್ರ ವೀಕ್ಷಕ ಧರ್ಮೇಂದ್ರ ಪ್ರಧಾನ ಭೇಟಿ- ಯಾಕೆ ಗೊತ್ತಾ?

ಬೆಂಗಳೂರು: ರಾಜ್ಯದಲ್ಲಿ ನೂತನ ಸಿಎಂ ಆಯ್ಕೆಗಾಗಿ ಶಾಸಕರ ಅಭಿಪ್ರಾಯ ಸಂಗ್ರಹಿಸಲು ಬೆಂಗಳೂರಿಗೆ ಕೇಂದ್ರ ಬಿಜೆಪಿ ವೀಕ್ಷಕರ ತಂಡ ಆಗಮಿಸಿದೆ.

ಕೇಂದ್ರ ವೀಕ್ಷಕರ ತಂಡದ ಸದಸ್ಯರಾಗಿರುವ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಬೆಂಗಳೂರಿಗೆ ಆಗಮಿಸಿದ್ದಾರೆ. ಕೇಂದ್ರ ಸಚಿವರನ್ನು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಭೇಟಿಯಾಗಿ ಮಾತುಕತೆ ನಡೆಸಿದರು. ಇದೇ ವೇಳೆ ಬಾಗಲಕೋಟೆ ಬಿಜೆಪಿ ಶಾಸಕ ವೀರಣ್ಣ ಚರಂತಿಮಠ ಕೂಡ ಗೋವಿಂದ ಕಾರಜೋಳ ಅವರೊಂದಿಗೆ ತೆರಳಿ ಧರ್ಮೇಂದ್ರ ಪ್ರಧಾನ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಇದೊಂದು ಸೌಜನ್ಯದ ಭೇಟಿಯಾಗಿದೆ ಎಂದು ಹೇಳಲಾಗುತ್ತಿದೆ. ಆದರೆ, ಈ ಸಂದರ್ಭದಲ್ಲಿ ಏನೆಲ್ಲ ಚರ್ಚೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿಲ್ಲ.

Leave a Reply

ಹೊಸ ಪೋಸ್ಟ್‌