ಕೇಂದ್ರ ವೀಕ್ಷಕರನ್ನು ಭೇಟಿ ಮಾಡಿದ ಮಾಜಿ ಸಚಿವ ಬಸವರಾಜ ಬೊಮ್ಮಾಯಿ- ಸಿಎಂ ಆಗ್ತಾರಾ ಮಾಜಿ ಸಿಎಂ ಪುತ್ರ?

ಬೆಂಗಳೂರು: ಮಾಜಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿಗೆ ಆಗಮಿಸಿರುವ ಕೇಂದ್ರ ವೀಕ್ಷಕರಾದ ಧರ್ಮೇಂದ್ರ ಪ್ರಧಾನ ಮತ್ತು ಕಿಶನರೆಡ್ಡಿ ಅವರನ್ನು ಭೇಟಿ ಮಾಡಿದ್ದಾರೆ.

ಇದೊಂದು ಸೌಹಾರ್ಧಯುತ ಭೇಟಿ ಎಂದು ಹೇಳಲಾಗುತ್ತಿದೆಯಾದರೂ, ಈಗ ಸಿಎಂ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ಹೆಸರು ಮುಂಚೂಣಿಗೆ ಬಂದಿದೆ.

ಬಸವರಾಜ ಬೊಮ್ಮಾಯಿ ಜೊತೆ ಮಾಜಿ ಸಿಎಂ ಜಗದೀಶ ಶೆಟ್ಟರ ಕೂಡ ಕೇಂದ್ರ ವೀಕ್ಷಕರನ್ನು ಭೇಟಿಯಾಗಿದ್ದಾರೆ. ಇಂದು ರಾತ್ರಿ ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ಸಿಎಂ ಅಭ್ಯರ್ಥಿಯ ಆಯ್ಕೆ ನಡೆಯಬಹುದಾಗಿದೆ.

ಬಸವರಾಜ ಬೊಮ್ಮಾಯಿ ಅವರ ತಂದೆ ಎಸ್. ಆರ್. ಬೊಮ್ಮಾಯಿ ಕೂಡ ಈ ಹಿಂದೆ ಸಿಎಂ ಆಗಿದ್ದರು. ಈಗ ಮಾಜಿ ಸಿಎಂ ಪುತ್ರ ಬಸವರಾಜ ಬೊಮ್ಮಾಯಿ ಸಿಎಂ ಆಗ್ತಾರಾ ಎಂಬುದು ಕುತೂಹಲ ಕೆರಳಿಸಿದೆ.

Leave a Reply

ಹೊಸ ಪೋಸ್ಟ್‌