ಹುಬ್ಬಳ್ಳಿಯಲ್ಲಿ ಸಿಎಂ ಗೆ ಆಶೀರ್ವದಿಸಿದ ರಂಭಾಪುರ ಶ್ರೀಗಳು- ಶುಭ ಕೋರಿದ ಸಭಾಪತಿ ಬಸವರಾಜ ಹೊರಟ್ಟಿ

ಹುಬ್ಬಳ್ಳಿ: ಉತ್ತರ ಕನ್ನಡ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳ ಭೇಟಿಗಾಗಿ ಆಗಮಿಸಿರುವ ಸಿಎಂ ಬಸವರಾಜ ಹೊರಟ್ಟಿ ಹುಬ್ಬಳ್ಳಿಗೆ ಬಂದಿದ್ದಾರೆ.

ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಬಂದ ನೂತನ ಸಿಎಂ‌
ಬಾಳೆಹೊನ್ನೂರಿನ ರಂಭಾಪುರಿ ಪೀಠದ ಶ್ರೀ ಜಗದ್ಗುರು ಡಾ. ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಹುಬ್ಬಳ್ಳಿಯಲ್ಲಿ ಸ್ವಾಮೀಜಿಗಳನ್ನು ಭೇಟಿ ಮಾಡಿದ ಬಳಿಕ ಅವರು ಉತ್ತರ ಕನ್ನಡ ಜಿಲ್ಲೆಗೆ ಪ್ರವಾಸ ಬೆಳೆಸಿದರು.

ಇದಕ್ಕೂ ಮುನ್ನ ಮುಖ್ಯಮಂತ್ರಿಯಾದ ಬಳಿಕ ಹುಬ್ಬಳ್ಳಿಗೆ ಇದೇ ಮೊದಲ ಬಾರಿಗೆ ವಿಶೇಷ ವಿಮಾನದಲ್ಲಿ ಆಗಮಿಸಿದ ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಿಧಾನ ಪರಿಷತ ಸಭಾಪತಿ ಬಸವರಾಜ ಹೊರಟ್ಟಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಅಭಿಮಾನಿಗಳು ಮತ್ತು ನೆರೆದಿದ್ದ ಜನತೆ ಬಸವರಾಜ ಬೊಮ್ಮಾಯಿ‌ಅವರಿಗೆ ಶುಭಾಷಯ ಕೋರಿದರು.

Leave a Reply

ಹೊಸ ಪೋಸ್ಟ್‌