ಸಿಎಂ ಆದ ಮೇಲೆ ಮೊದಲ ಬಾರಿಗೆ ದೆಹಲಿಗೆ ತೆರಳಿ ಕೇಂದ್ರ ಸಚಿವರಿಗೆ ಕೃತಜ್ಞತೆ ಸಲ್ಲಿಸಿದ ಬಸವರಾಜ ಬೊಮ್ಮಾಯಿ

ನವದೆಹಲಿ: ನೂತನ ಸಿಎಂ ಆದ ಬಳಿಕ ಬಸವರಾಜ ಬೊಮ್ಮಾಯಿ ಇದೇ ಮೊದಲ ಬಾರಿಗೆ ರಾಷ್ಟ್ರ ರಾಜಧಾನಿ ನವದೆಹಲಿಗೆ ತೆರಳಿದ್ದಾರೆ.  ದೆಹಲಿಯಲ್ಲಿ ಕೇಂದ್ರ ಸಚಿವರು ಮತ್ತು ಬಿಜೆಪಿ ಮುಖಂಡರನ್ನು ಭೇಟಿ ಮಾಡಿದ ಬಸವರಾಜ ಬೊಮ್ಮಾಯಿ ಕೃತಜ್ಞತೆ ಸಲ್ಲಿಸಿದ್ದಾರೆ.

ರಕ್ಷಣಾ ಸಚಿವರ ಭೇಟಿ

ನವದೆಹಲಿಯಲ್ಲಿ ಮೊದಲಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥಸಿಂಗ್ ಅವರನ್ನು ಭೇಟಿ ಮಾಡಿದ ಬೊಮ್ಮಾಯಿ ಕೃತಜ್ಞತೆ ಸಲ್ಲಿಸಿ ಸನ್ಮಾನಿಸಿದರು. ಅಲ್ಲದೇ, ಮಾತುಕತೆ ನಡೆಸಿದರು.

ಜಲಶಕ್ತಿ ಸಚಿವರ ಭೇಟಿ

ಇದೇ ವೇಳೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರಸಿಂಗ್ ಶೇಖಾವತ ಅವರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದರು. ಅಲ್ಲದೇ, ರಾಜ್ಯದ ನೀರಾವರಿ ವಿಷಯಗಳ ಕುರಿತು ಚರ್ಚೆ ನಡೆಸಿದರು. ಈ ಸಂದರ್ಭದಲ್ಲವಿ ಹಾವೇರಿ ಸಂಸದ ಶಿವಕುಮಾರ ಉದಾಸಿ, ಕಲಬುರಗಿ ಸಂಸದ ಡಾ. ಉಮೇಶ ಜಾಧವ, ಮಾಜಿ ಸಚಿವರಾದ ಆರ್. ಅಶೋಕ ಮತ್ತು ಉಮೇಶ ವಿ. ಕತ್ತಿ ಸಿಎಂ ಜೊತೆಗಿದ್ದರು.

ಸಚಿವರಾದ ಪ್ರಹ್ಲಾದ ಜೋಶಿ, ಭಗವಂತ ಖೂಬಾ ಭೇಟಿ

ಬಳಿಕ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಮತ್ತು ಭಗವಂತ ಖೂಬಾ ಅವರನ್ನು ಭೇಟಿ ಮಾಡಿದರು.

ಗೃಹ ಸಚಿವ ಅಮಿತ ಶಾ ಭೇಟಿ

ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೇಂದ್ರ ಗೃಹ ಸಚಿವ ಅಮಿತ ಶಾ ಅವರನ್ನು ಭೇಟಿ ಮಾಡಿದರು. ಅಲ್ಲದೇ, ತಾವು ಸಿಎಂ ಆಗಲು ಸಹಕರಿಸಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು.

 

Leave a Reply

ಹೊಸ ಪೋಸ್ಟ್‌