ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಭೇಟಿ ಮಾಡಿ ಆಶೀರ್ವಾದ ಪಡೆದ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿಎಂ ಆದ ಬಳಿಕ ಇದೇ ಮೊದಲ ಬಾರಿಗೆ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.   ಸಿಎಂ ಆದ ಬಳಿಕ ಇದೇ ಮೊದಲ ಬಾರಿ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಅವರ ಬೆಂಗಳೂರಿನ ಪದ್ಮನಾಭನಗರ ನಿವಾಸಕ್ಕೆ ತೆರಳಿದ ಬಸವರಾಜ ಬೊಮ್ಮಾಯಿ ಮಾಜಿ ಪ್ರಧಾನಿ ಪಾದ ಸ್ಪರ್ಶಿಸಿ ಆಶೀರ್ವಾದ ಪಡೆದರು. ಬಳಿಕ ಹಾರ ಹಾಕಿ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಮಾಜಿ ಪ್ರಧಾನಿ ಎಚ್. ಡಿ. […]

ಯತ್ನಾಳ ಹೇಳಿಕೆ ನೀಡಿ ಹಾಳಾಗುತ್ತಿದ್ದಾರೆ- ಮಠಾಧೀಶರ ಗೊಡ್ಡು ಬೆದರಿಕೆಗಳಿಗೆ ಬಿಜೆಪಿಯಲ್ಲಿ ಕವಡೆ ಕಾಸಿನ ಕಿಮ್ಮತ್ತಿಲ್ಲ- ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ

ವಿಜಯಪುರ: ವಿಜಯಪುರ ನಗರ ಬಿಜೆಪಿ ಶಾಸಕ ಬಸನಗಡೌಡ ಪಾಟೀಲ ಯತ್ನಾಳ ಬಹಿರಂಗ ಹೇಳಿಕೆ ‌ಕೊಟ್ಟು ಅವರೇ ಹಾಳಾಗುತ್ತಿದ್ದಾರೆ. ಅವರು ನನ್ನ ಆತ್ಮೀಯ ಸ್ನೇಹಿತ. ಹೀಗಾಗಿ ಬಹಿರಂಗ ಹೇಳಿಕೆ ಕೊಡುವುದನ್ನು ತಕ್ಷಣ ನಿಲ್ಲಿಸಬೇಕೆಂದು ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ಯತ್ನಾಳಗೆ ಬುದ್ದಿವಾದ ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಯತ್ನಾಳ ಅವರ ಹೇಳಿಕೆಗಳಿಂದ ಪಕ್ಷಕ್ಕೆ ಹಾನಿಯಾಗುತ್ತದೆ ಎಂದು ನನಗೇನು ಅನಿಸುವದಿಲ್ಲ. ನಾಲ್ಕು ಗೋಡೆಗಳ ಮದ್ಯ ಕುಳಿತು ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಈ ಕುರಿತು ನಾನು ಯತ್ನಾಳ ಅವರೊಂದಿಗೆ ಮಾತನಾಡುತ್ತೇನೆ ಎಂದು […]

ಮುದ್ದೇಬಿಹಾಳ ಸಾರಿಗೆ ಸಿಬ್ಬಂದಿ ಮಾನವೀಯತೆ- ರಾತ್ರಿಯಲ್ಲಿ ಇವರು ಮಾಡಿದ ಕಾರ್ಯವೇನು ಗೊತ್ತಾ?

ವಿಜಯಪುರ: ಬಸವ ನಾಡಿನ ಸಾರಿಗೆ ಸಿಬ್ಬಂದಿಯ ಈ ಮಾನವೀಯ ಕಾರ್ಯ ಇಲಾಖೆಯ ಗೌರವ ಕೂಡ ಹೆಚ್ಚಲು ಕಾರಣವಾಗಿದೆ. ಇವರ ಈ ಕಾರ್ಯಕ್ಕೆ ಈಗ ಜನಮೆಚ್ಚುಗೆ ವ್ಯಕ್ತವಾಗಿದ್ದು, ತಮ್ಮ ಸೇವಗೆ ಜನರಿಂದ ಸಿಕ್ಕ ಪ್ರತಿಕ್ರಿಯಿಂದ ಇಲಾಖೆಯ ಸಿಬ್ಬಂದಿಯೂ ಖುಷ್ ಆಗಿದ್ದಾರೆ. ಅಷ್ಟಕ್ಕೂ ಆಗಿದ್ದೇನೆಂದರೆ, ಶನಿವಾರ ರಾತ್ರಿ 10 ಗಂಟೆಯ ಸಮಯ ಸುಮಾರಿಗೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಬಸ್ ನಿಲ್ದಾಣದಲ್ಲಿ ಒಂದೂವರೆ ತಿಂಗಳ ಹುಷಾರಿಲ್ಲದ ಮಗುವನ್ನು ತಾಯಿ ತನ್ನ ಮಡಿಲಿನಲ್ಲಿ ಮಲಗಿಸಿಕೊಂಡಿದ್ದಳು. ಈ ಮಹಿಳೆಯ ಜೊತೆ ಆಕೆಯ ತಾಯಿ ಹಾಗೂ […]

ಓಲಂಪಿಕ್ಸ್ ಕ್ರೀಡಾಪಟುಗಳಿಗೆ ಶುಭ ಹೇಳಲು ಬೆಂಗಳೂರಿನಲ್ಲಿ ಬೆಳ್ಳಂಬೆಳಿಗ್ಗೆ ಸೈಕ್ಲಿಂಗ್ ಜಾಥಾ- ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ

ಬೆಂಗಳೂರು: ಟೋಕಿಯೋ ಓಲಂಪಿಕ್ಸ್ ನಲ್ಲಿ ಪಾಲ್ಗೋಂಡಿರುವ ಭಾರತೀಯ ಕ್ರೀಡಾಪಟುಗಳಿಗೆ ಚಿಯರ್ ಅಪ್ ಹೇಳಲು ಬೆಂಗಳೂರಿನಲ್ಲಿ ಚಿಯರ್ ಫಾರ್ ಇಂಡಿಯಾ-ಬಿ ಲೈಕ್ ಆ್ಯನ್ ಓಲಂಪಿಕ್ ಸೈಕ್ಲಿಂಗ್ ರೈಡ್ ಘೋಷ ವಾಕ್ಯದಡಿ ಆಯೋಜಿಸಿದ ಸೈಕಲ್ ಜಾಥಾಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಜಾಥಾ ಆಯೋಜಿಸಿದ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ, ಅಲ್ಲದೇ, ಈ ಜಾಥಾದಲ್ಲಿ ಪಾಲ್ಗೋಂಡ ಮಾಜಿ ಸಿಎಂ ಡಿ. ವಿ. ಸದಾನಂದಗೌಡ, ಸಂಸದ ಪಿ. ಸಿ. […]