29 ಜನರಿಗೆ ಸಚಿವ ಸ್ಥಾನ, ಡಿಸಿಎಂ ಇಲ್ಲ, ವಿಜಯೇಂದ್ರಗೂ ಅವಕಾಶವಿಲ್ಲ- ಸಿಎಂ ಬಸವರಾಜ ಬೊಮ್ಮಾಯಿ

ಬೆಂಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ಬಾರಿ 29 ಜನರಿಗೆ ಸಚಿವ ಸ್ಥಾನ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಸಂಪುಟದಲ್ಲಿ ಡಿಸಿಎಂ ಇರುವುದಿಲ್ಲ. ಬಿ. ವೈ. ವಿಜಯೇಂದ್ರ ಅವರಿಗೂ ಸಚಿವ ಸ್ಥಾನ ಇಲ್ಲ ಎಂದು ಸ್ಪಷ್ಟಪಡಿಸಿದರು.

ಈ ಬಾರಿ ಅನುಭವ ಹಾಗೂ ಹೊಸಶಕ್ತಿಗಳ ಸಮ್ಮಿಶ್ರ ಸಚಿವ ಸಂಪುಟ ಕಾರ್ಯ ನಿರ್ವಹಿಸಲಿದೆ. 7 ಜನ ಒಬಿಸಿ, 3 ಜನ ಎಸ್.ಸಿ., ಓರ್ವ ಎಸ್. ಟಿ, 7 ಜನ ಒಕ್ಕಲಿಗರು, 8 ಜನ ಲಿಂಗಾಯತರು, ಓರ್ವ ರೆಡ್ಡಿ, ಓರ್ವ ಮಹಿಳೆಗೆ ಅವಕಾಶ ನೀಡಲಾಗಿದೆ ಎಂದು ಅವರು ತಿಳಿಸಿದರು.

ಜನಪರ ಆಡಳಿತ ನೀಡುವುದರ ಜೊತೆಗೆ ಚುನಾವಣೆ ಸವಾಲು ಎದುರಿಸಲು ಸಿದ್ಧರಾಗುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣಸಿಂಗ್ ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌