ಆ. 23 ರಿಂದ , 9, 10, ಪಿಯು ತರಗತಿಗಳು ಆರಂಭ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿದ್ದ ಹೈಸ್ಕೂಲ್ ಮತ್ತು ಪಿಯು ಕಾಲೇಜು ಭೌತಿಕ ತರಬೇತಿಗಳನ್ನು ಆ. 23 ರಿಂದ ಪುನಾರಂಭಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಕೊರೊನಾ ಸ್ಥಿತಿಗತಿ ಕುರಿತು ಕೋವಿಡ್ ಟಾಸ್ಕಫೋರ್ಸ್ ಸಮಿತಿ ಮತ್ತು ಆರೋಗ್ಯ ಹಾಗೂ ಇತರ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಆ. 23 ರಿಂದ ಎರಡು ಹಂತಗಳಲ್ಲಿ ಶಾಲೆ, ಕಾಲೇಜುಗಳನ್ನು ಪುನಾರಂಭಿಸಲು ನಿರ್ಧರಿಸಲಾಗಿದೆ. ಮೊದಲ ಹಂತದಲ್ಲಿ 9 ರಿಂದ 12ನೇ ತರಗತಿಯ ಶಾಲೆ ಮತ್ತು ಕಾಲೇಜುಗಳನ್ನು ಎರಡು ಬ್ಯಾಚುಗಳಲ್ಲಿ ನಡೆಸುವ ಕುರಿತು ತೀರ್ಮಾನಿಸಲಾಗಿದೆ. ಆಗಷ್ಟ ತಿಂಗಳಾಂತ್ಯಕ್ಕೆ ಕೊರೊನಾ ಮೂರನೇ ಅಲೆ ಸ್ಥಿತಿಗತಿ ನೋಡಿಕೊಂಡು ಪ್ರಾಥಮಿಕದಿಂದ 8 ತರಗತಿ ವರೆಗೆ ಶಾಲೆಗಳನ್ನು ಆರಂಭಿಸುವ ಕುರಿತು ನಿರ್ಧರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Leave a Reply

ಹೊಸ ಪೋಸ್ಟ್‌