ತುಮಕೂರಿಗೆ ತೆರಳಿ ಶ್ರೀ ಸಿದ್ಧಗಂಗಾ ಸ್ವಾಮೀಜಿಗಳ ದರ್ಶನ ಪಡೆದ ಸಿಎಂ ಬಸವರಾಜ ಬೊಮ್ಮಾಯಿ

ತುಮಕೂರು: ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ತುಮಕೂರಿಗೆ ತೆರಳಿದ ಸಿಎಂ ಬಸವರಾಜ ಬೊಮ್ಮಾಯಿ ಶ್ರೀ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳ ಆಶೀರ್ವಾದ ಪಡೆದರು.

ಮಠದ ಆವರಣದಲ್ಲಿರುವ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮಿಗಳ ಗದ್ದುಗೆ ಸ್ಥಳಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದ ಅವರು, ಶ್ರೀ ಸಿದ್ದಲಿಂಗ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಮಂತ್ರ ಘೋಷದೊಂದಿಗೆ ಶ್ರೀಗಳು ಮುಖ್ಯಮಂತ್ರಿಗಳಿಗೆ ಶುಭಾಶೀರ್ವಾದ ಮಾಡಿದರು. ಅಲ್ಲದೇ, ಈ ಸಂದರ್ಭದಲ್ಲಿ ಈ ಹಿಂದೆ ಬಸವರಾಜ ಬೊಮ್ಮಾಯಿ ಅವರು ಮಠಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ತೆಗೆಯಲಾಗಿದ್ದ ಭಾವಚಿತ್ರವನ್ನೇ ಶ್ರೀಗಳು ನೆನಪಿನ ಕಾಣಿಕೆಯಾಗಿ ನೀಡಿದರು.

 

ಈ ಸಂದರ್ಭದಲ್ಲಿ ಸಚಿವರಾದ ವಿ. ಸೋಮಣ್ಣ, ಮುರುಗೇಶ್ ನಿರಾಣಿ, ಜೆ. ಸಿ. ಮಾಧುಸ್ವಾಮಿ, ಬಿ. ಸಿ. ನಾಗೇಶ, ಸಂಸದ ಜಿ. ಎಸ್. ಬಸವರಾಜ, ಶಾಸಕರಾದ ಮಹಾಂತೇಶ ಕವಟಗಿಮಠ, ಜ್ಯೋತಿ ಗಣೇಶ, ಡಾ. ರಾಜೇಶಗೌಡ, ಮಾಜಿ ಸಚಿವರಾದ ರೇಣುಕಾಚಾರ್ಯ, ಸೊಗಡು ಶಿವಣ್ಣ ಮತ್ತು ಇತರರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌