ಹೊಸ ಬದಲಾವಣೆ ತರಲು ಹೊಸ ಸಚಿವರಿಗೆ ದೊಡ್ಡ ಖಾತೆ ನೀಡಲಾಗಿದೆ- ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಹೊಸಬರಿಗೆ ದೊಡ್ಡ ಖಾತೆಗಳನ್ನು ನೀಡುವ ಮೂಲಕ ಹೊಸ ಬದಲಾವಣೆ ತರಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಚಿವರಿಗೆ ಈಗ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಖಾತೆ ಹಂಚಿಕೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಇನ್ನು ಮುಂದೆ ಆಯಾ ಸಚಿವರು ತಮ್ಮ ಖಾತೆಯನ್ನು ನಿಭಾಯಿಸಿ ಒಳ್ಳೆಯ ಕೆಲಸ ಮಾಡುತ್ತಾರೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು

ಖಾತೆ ಹಂಚಿಕೆ ಬಗ್ಗೆ ಸಚಿವ ಆನಂದಸಿಂಗ್ ಅಸಮಾಧಾನ ವಿಚಾರ ವ್ಯಕ್ತಪಡಿಸಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಆನಂದಸಿಂಗ್ ಅವರನ್ನು ಕರೆದು ಮಾತನಾಡುತ್ತೇನೆ. ಅವರು ನನ್ನ ಆತ್ಮಿಯ ಮಿತ್ರರಾಗಿದ್ದಾರೆ ಎಂದು ತಿಳಿಸಿದರು.

ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ನಿವಾಸಕ್ಕೆ ಭೇಟಿ ನೀಡಿರುವ ಬಗ್ಗೆ ಪ್ರೀತಂ ಗೌಡ ಅಸಮಾಧಾನ ವ್ಯಕ್ತಪಡಿಸಿರುವ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಬಸವರಾಜ ಬೊಮ್ಮಾಯಿ, ಅವರು ಎಲ್ಲರೂ ನಮ್ಮ ಆತ್ಮೀಯರು. ಅವರಲ್ಲಿ ಕೆಲವು ಭಾವನೆಗಳಿವೆ. ಅವರೆಲ್ಲರನ್ನು ಕರೆದು ಮಾತನಾಡುತ್ತೇನೆ ಎಂದು ತಿಳಿಸಿದರು.

Leave a Reply

ಹೊಸ ಪೋಸ್ಟ್‌