ಭಾರತ ಬಿಟ್ಟು ತೊಲಗಿ ಚಳವಳಿ ಸ್ಮರಣೆ- ಡಾ. ಗಂಗಾಧರ ಸಂಬಣ್ಣಿ ನೇತತ್ವದಲ್ಲಿ ಕಾಂಗ್ರೆಸ್ ಪಥಸಂಚಲನ

ವಿಜಯಪುರ: ದೇಶದ ಸ್ವಾತಂತ್ರ್ಯಕ್ಕಾಗಿ ನಡೆದ ಅಂತಿಮ ಹೋರಾಟ ಬ್ರಿಟೀಷರೇ ಭಾರತ ಬಿಟ್ಟು ತೊಲಗಿ ಚಳವಳಿಯ 79ನೇ ವರ್ಷಾಚರಣೆ ವಿಜಯಪುರದಲ್ಲಿ ನಡೆಯಿತು‌.

 

ವಿಜಯಪುರ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಸೇವಾದಳದ ಜಿಲ್ಕಾಧ್ಯಕ್ಷ ಡಾ. ಗಂಗಾಧರ ಸಂಬಣ್ಣಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಪಥ ಸಂಚಲನ ನಡೆಸಿದರು.

ವಿಜಯಪುರ ನಗರದ ಕೋರ್ಟಗ ಬಳಿ ಇರುವ ದೇವರಾಜ ಅರಸ ವೃತ್ತದಿಂದ ಜಿಲ್ಲಾ ಕಾಂಗ್ರೆಸ್ ಕಚೇರಿವರೆಗೆ ಕೈಯಲ್ಲಿ ಕಾಂಗ್ರೆಸ್ ಧ್ವಜವನ್ನು ಹಿಡಿದ ಮುಖಂಡರು ಮತ್ತು ಕಾರ್ಯಕರ್ತರು ಜಾಥಾದಲ್ಲಿ ಪಾಲ್ಗೊಂಡರು.

 

ಬಳಿಕ ಪಕ್ಷದ ಕಚೇರಿಲ್ಲಿ ನಡೆದ ಕಾರ್ಯಕ್ರಮದಲ್ಲಿ ಕ್ವಿಟ್ ಇಂಡಿಯಾ ಚಳವಳಿಯ ಹರಿಕಾರ ಮತ್ತು ರಾಷ್ಟ್ರಪಿತ ಮಹಾತ್ಮಾ ಗಾಂಧಿ ಅವರ ಗುಣಗಾನ ಮಾಡಲಾಯಿತು. ಈ ಹೋರಾಟದಲ್ಲಿ ಪಾಲ್ಗೊಂಡ ಕಾಂಗ್ರೆಸ್ ಮುಖಂಡರನ್ನು ಈ ಸಂದರ್ಭದಲ್ಲಿ ಸ್ಮರಿಸಲಾಯಿತು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರೊ. ರಾಜು ಆಲಗೂರ, ಮುಖಂಡರಾದ ಹಮೀದ ಮುಶ್ರಿಫ್, ವಸಂತ ಹೊನಮೋಡಿ, ಜಮೀಕ ಭಕ್ಷಿ ಸೇರಿದಂತೆ ನಾನಾ ಮುಖಂಡರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌