ರಾಜ್ಯ ಆಡಳಿತ ಸುಧಾರಣೆ ಆಯೋಗದಿಂದ ಕೆಲ ಇಲಾಖೆಗಳ ಸುಧಾರಣೆ ಕುರಿತು ಸಿಎಂಗೆ ವರದಿ ಸಲ್ಲಿಕೆ

ಬೆಂಗಳೂರು: ಕರ್ನಾಟಕ ರಾಜ್ಯ ಆಡಳಿತ ಸುಧಾರಣೆ ಆಯೋಗದ ಅಧ್ಯಕ್ಷ ಮತ್ತು ರಾಜ್ಯ ಸರಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ ನೇತೃತ್ವದ ಕೆಲ ಇಲಾಖೆಗಳ ಸುಧಾರಣೆ ಕುರಿತು ಸಿಎಂ ಗೆ ವರದಿ ಸಲ್ಲಿಸಿದೆ.

ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಆಯೋಗ ಈ ಸಂದರ್ಭದಲ್ಲಿ ಕೆಲ ಇಲಾಖೆಗಳ ಸುಧಾರಣೆಗೆ ಸಂಬಂಧಿಸಿದ ವರದಿಯನ್ನು ಸಲ್ಲಿಸಿತು.

ಈ ಸಂದರ್ಭದಲ್ಲಿ ಸಿಎಂ ಜೊತೆ ಕೆಲ ಕಾಲ ಆಯೋಗದ ಅಧ್ಯಕ್ಷರು ಮತ್ತು ಇತರರು ಚರ್ಚೆ ನಡೆಸಿದರು.

Leave a Reply

ಹೊಸ ಪೋಸ್ಟ್‌