ಕೆ ಪಿ ಎಸ್ ಸಿಯನ್ನು ಸ್ವಚ್ಛಗೊಳಿಸಿ- ಅಧ್ಯಕ್ಷರನ್ನು ವಜಾ ಮಾಡಲು ಆಗ್ರಹಿಸಿ ವಿಜಯಪುರದಲ್ಲಿ ಪ್ರತಿಭಟನೆ

ವಿಜಯಪುರ: ರಾಜ್ಯ ಸರkeರದ ನಾನಾ ಇಲಾಖೆಗಳ ಅಧಿಕಾರಿಗಳು ಮತ್ತು ಇತರ ಹುದ್ದೆಗಳ ನೇಮಕಾತಿಗಾಗಿ ನಡೆಯುವ ಪರೀಕ್ಷೆಗಳಲ್ಲಿ ಅಕ್ರಮ, ಭ್ರಷ್ಟಾಚಾರ, ಸ್ವಜನ ಪಕ್ಷಪಾತ ನಡೆಯುವುದನ್ನು ತಪ್ಪಿಸಬೇಕು. ಎಲ್ಲ ಉದ್ಯೋಗಾಕಾಂಕ್ಷಿಗಳಿಗೆ ನ್ಯಾಯ ಸಿಗಬೇಕು ಎಂದು ಅಖಿಲ ಭಾರತ ನಿರುದ್ಯೋಗಿ ಯುವಜನರ ಹೋರಾಟ ಸಮಿತಿ ಕರ್ನಾಟಕ ರಾಜ್ಯ ಕಾರ್ಯದರ್ಶಿ ಸಿದ್ದಲಿಂಗ ಬಾಗೇವಾಡಿ ಹೇಳಿದ್ದಾರೆ. ಕೆ ಪಿ ಎಸ್ ಸಿ.ಯನ್ನು ಭ್ರಷ್ಟ ಆಡಳಿತಗಾರರಿಂದ ಮುಕ್ತಗೊಳಿಸಲು ಆಗ್ರಹಿಸಿ ಹಾಗೂ ಅನರ್ಹ ಅಧ್ಯಕ್ಷರನ್ನು ವಜಾಗೊಳಿಸಲು ಒತ್ತಾಯಿಸಿ ವಿಜಯಪುರದ ಜಿಲ್ಲಾಧಿಕಾರಿಗಳ ಕಛೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಪಾಲ್ಗೋಂಡು […]

ಭಾರತ ಹಾಕಿ ಮಹಿಳಾ ತಂಡದ ಕೋಚ್ ಅಂಕಿತಾ ಅವರನ್ನು ಸನ್ಮಾನಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ

ಬೆಂಗಳೂರು: ಭಾರತೀಯ ಮಹಿಳಾ ಹಾಕಿ ತಂಡದ ತರಬೇತುದಾರರಲ್ಲಿ ಒಬ್ಬರಾದ ಅಂಕಿತಾ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನಲ್ಲಿ ಸನ್ಮಾನಿಸಿ ಗೌರವಿಸಿದರು. ಟೋಕಿಯೋ ಓಲಂಪಿಕ್ಸ್ ನಲ್ಲಿ ಭಾರತದ ಮಹಿಳಾ ಹಾಕಿ ತಂಡ ಅತ್ಯುತ್ತಮ ಪ್ರದರ್ಶನ ತೋರಿದೆ. ಪದಕ‌ ಗೆಲ್ಲಲು ಸಾಧ್ಯವಾಗದಿದ್ದರೂ ಭಾರತೀಯರ ಮನಸ್ಸನ್ನು ಮಹಿಳಾ ತಂಡ ಗೆದ್ದಿದೆ. ಈ ತಂಡದ ತರಬೇತಿದಾರರಾದ ನಿಮಗೆ ತುಂಬು ಹೃದಯದ ಶುಭಾಶಯ ಕೋರುತ್ತೇನೆ. ಕನ್ನಡದ ಯುವತಿ ಭಾರತ ತಂಡದ ಕೋಚ್ ಆಗಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ ಎಂದು ಸಿಎಂ‌ ಹೇಳಿದರು. ಅಂಕಿತ […]

ಅನಾರೋಗ್ಯದ ಸಂದರ್ಭದಲ್ಲಿ ಆರೈಕೆ ಮಾಡಿದ ಆರೋಗ್ಯ ಸಿಬ್ಬಂದಿಗೆ ನೆರವಾದ ಜೆಡಿಎಸ್ ಶಾಸಕ ಡಾ. ದೇವಾನಂದ ಚವ್ಹಾಣ

ವಿಜಯಪುರ: ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಒಂದು ವಾರ ಉಪಚಾರ ಪಡೆದು ಆಸ್ಪತ್ರೆಯಿಂದ ಡಿಶ್ಚಾರ್ಜ್ ಆಗುವ ಮುಂಚೆ ತಮ್ಮನ್ನು ಅಕ್ಕರೆಯಿಂದ ಆರೈಕೆ ಮಾಡಿದ ಆಸ್ಪತ್ರೆಯ ಸಿಬ್ಬಂದಿಗಳಿಗೆ ನೆರವಾಗುವ ಮೂಕಲ ಕೃತಜ್ಞತೆ ಸಲ್ಲಿಸಿದ್ದಾರೆ. ಬಸವನಾಡು ವಿಜಯಪುರ ಜಿಲ್ಲೆಯ ನಾಗಠಾಣ ಜೆಡಿಎಸ್ ಶಾಸಕ ಡಾ. ದೇವಾನಂದ ಚವ್ಹಾಣ ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ವಾರ ವಿಜಯಪುರ ನಗರದ ಆಯುಷ್ ಆಸ್ಪತ್ರೆಗೆ ದಾಖಲಾಗಿದ್ದರು. ಈಗ ಗುಣಮುಖರಾಗಿ ಡಿಶ್ಚಾರ್ಜ್ ಆಗುತ್ತಿದ್ದಾರೆ. ಅದಕ್ಕೂ ಮುಂಚೆ ತಮಗೆ ಚಿಕಿತ್ಸೆ ನೀಡಿದ ಆಯುಷ್ ಆಸ್ಪತ್ರೆಯ ಮುಖ್ಯಸ್ಥ ಡಾ. […]

ಪಂಚಮಸಾಲಿ ಅಷ್ಟೇ ಅಲ್ಲ, ಧ್ವನಿ ಇಲ್ಲದ ಆದಿ ಬಣಜಿಗ, ಕೂಡು ಒಕ್ಕಲಿಗರನ್ನೂ 2ಎಗೆ ಸೇರಿಸಬೇಕು- ಎಸ್ಟಿ ಮೀಸಲಾತಿ ಪ್ರಮಾಣ ಹೆಚ್ಚಿಸಬೇಕು- ಯತ್ನಾಳ

ವಿಜಯಪುರ: ಕೇವಲ ಲಿಂಗಾಯಿತ ಪಂಚಮಸಾಲಿ ಮಾತ್ರವಲ್ಲ, ಧ್ವನಿ ಇಲ್ಲದ ಲಿಂಗಾಯಿತ ಉಪಪಂಗಡಗಳಾದ ಆದಿ ಬಣಜಿಗ, ಕೂಡು ಒಕ್ಕಲಿಗರನ್ನೂ 2ಎ ಮೀಸಲಾತಿ ಪಟ್ಟಿಗೆ ಸೇರಿಸಬೇಕು ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಗ್ರಹಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಸಮುದಾಯಕ್ಕೆ 2 ಮೀಸಲು ನೀಡುವ ಹೋರಾಟದ ಕುರಿತು ಕೂಡಲ ಸಂಗಮ ಲಿಂಗಾಯಿತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಈಗಾಗಲೇ ಮಾತನಾಡಿದ್ದಾರೆ. ನಾವು ಪಂಚಮಸಾಲಿ ಸಮಾಜ ಅಷ್ಟೇ ಅಲ್ಲ. ಅದಿ ಬಣಜಿಗ, […]

ಬಿ ಎಲ್ ಡಿ ಇ ಎಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ

ವಿಜಯಪುರ: ವಿಜಯಪುರದ ಪ್ರತಿಷ್ಠಿತ ಬಿ ರಲ್ ಡಿ ಇ ಸಂಸ್ಥೆಯ ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಗ್ರಂಥಾಲಯ ವಿಜ್ಞಾನ ಪಿತಾಮಹ ಪದ್ಮಶ್ರೀ ಪುರಸ್ಕೃತ ಡಾ. ಎಸ್. ಆರ್. ರಂಗನಾಥನ್ ಅವರ 129ನೇ ಜನ್ಮ ದಿನದ ಅಂಗವಾಗಿ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆಯನ್ನು ಆಚರಿಸಲಾಯಿತು. ವಿದ್ಯಾರ್ಥಿಗಳಿಗೆ ಹಾಗೂ ಅಧ್ಯಾಪಕರಿಗೆ ಗ್ರಂಥಾಲಯದಲ್ಲಿನ ಚಟುವಟಿಕೆಗಳ ಕುರಿತು ನಾನಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಅತ್ಯುತ್ತಮ ಗ್ರಂಥಾಲಯ ಬಳಕೆದಾರರ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳ ವಿಭಾಗದಲ್ಲಿ ಗೌರಿ ಚಿಂಚೊಳ್ಳಿ ಪ್ರಥಮ ಮತ್ತು ನಿಸರ್ಗ ಪಾಟೀಲ […]

ಇತರರಿಗೆ ಮಾದರಿಯಾದ ಮುಖ್ಯಮಂತ್ರಿ- ಅಂಗಾಂಗ ದಾನಕ್ಕೆ ಸಹಿ ಹಾಕಲು ಸಿಎಂ ಬಸವರಾಜ ಬೊಮ್ಮಾಯಿ ನಿರ್ಧಾರ

ಉಡುಪಿ: ವಿಶ್ವ ಅಂಗಾಂಗ ದಾನ ದಿನದಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಮತ್ತು ಮಾದರಿ ನಿರ್ಧಾರ ಕೈಗೊಳ್ಳುವ ಮೂಲಕ ಜನಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಉಡುಪಿಯಲ್ಲಿ ಕಂಟ್ರಿ ಹೊಟೇಲ್ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇಂದು ವಿಶ್ವ ಅಂಗಾಂಗ ದಾನ ದಿನ ಆಚರಿಸಲಾಗುತ್ತಿದೆ. ಅಂಗಾಂಗ ದಾನದಿಂದ ಬಹಳಷ್ಟು ಜನರ ಜೀವ ಉಳಿಸಬೇಕಾಗಿದೆ ಎಂದು ತಿಳಿಸಿದರು. ಮಣ್ಣಲ್ಲಿ ಮಣ್ಣಾಗಿ ಹೋಗುವ ಜೀವ ಅಂಗಾಂಗ ದಾನದ ಮೂಲಕ ಜನರ ಜೀವ ಉಳಿಸಲು ಸಹಾಯವಾದರೆ ಯಾಕೆ ಮಾಡಬಾರದು ಎಂಬುದನ್ನು ಅರಿಯಬೇಕು. ಅಂಗಾಂಗ ದಾನ […]

ಉಡುಪಿಯಲ್ಲಿ ನಾನಾ ಮಠಗಳಿಗೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಸಿಎಂ ಬಸವರಾಜ ಬೊಮ್ಮಾಯಿ

ಉಡುಪಿ: ಕೊರೊನಾ ನಿಯಂತ್ರಣ ಕುರಿತು ಪ್ರಗತಿ ಪರಿಶೀಲನೆಗಾಗಿ ಕರಾವಳಿ ಜಿಲ್ಲೆಗಳ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾನಾ ಮಠಗಳಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ನಾನಾ ಮಠಾಧೀಶರಿಂದ ಸಿಎಂ ಆಶೀರ್ವಾದ ಪಡೆದರು. ಆದಮಾರು ಮಠಕ್ಕೆ ಭೇಟಿ   ಉಡುಪಿ ಅದಮಾರು ಮಠದ ಈಶಪ್ರಿಯ ಶ್ರೀಗಳ ಆಶೀರ್ವಾದ ಪಡೆದು ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಪಲಿಮಾರು ಮಠಕ್ಕೆ ಭೇಟಿ ಉಡುಪಿ ಫಲಿಮಾರು ಮಠಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶ್ರೀಗಳಿಂದ ಆಶೀರ್ವಾದ ಪಡೆದರು. ಶ್ರೀಕೃಷ್ಣ ಮಠಕ್ಕೆ ಭೇಟಿ ಉಡುಪಿ ಶ್ರೀ ಕೃಷ್ಣ […]